ಬೆಂಗಳೂರು: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ.ಸೋಮಣ್ಣ (v.Somanna) ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.
ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನ ಕಾಂಗ್ರೆಸ್ಗೆ (Congress) ಲಭ್ಯವಾಗಲಿದೆ. ಉಳಿದ ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ (BJP) ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ ರಾಜ್ಯಸಭೆಗೆ ತಮ್ಮ ಹೆಸರು ಘೋಷಿಸುವಂತೆ ವರಿಷ್ಠರಿಗೆ ಮನವಿ ಮಾಡುತ್ತಿದ್ದಾರೆ.
ಕಳೆದ ಬಾರಿ ವರಿಷ್ಠರಿಗೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಯಾರಿಗೆ ಅವಕಾಶ ಕೊಡುತ್ತಾರೆ ಗೊತ್ತಿಲ್ಲ. ಒಂದು ವೇಳೆ ಕೊಟ್ಟರೆ ಒಳ್ಳೆ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಕೊಡಲಿಲ್ಲ ಅಂದರೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ತುಮಕೂರು ಕ್ಷೇತ್ರಕ್ಕೆ ನಾನು ಸ್ಪರ್ಧಿಸಬೇಕು ಎನ್ನುವುದು ಹಾಲಿ ಸಂಸದ ಬಸವರಾಜು ಅವರ ಅಭಿಲಾಷೆ. ಸ್ಥಳೀಯ ನಾಯಕರೂ ಸಹ ಬೆಂಬಲ ನೀಡುತ್ತಿದ್ದಾರೆ. ಅಂತಿಮವಾಗಿ ಎಲ್ಲವೂ ಹೈಕಮಾಂಡ್ ನಿರ್ಧರ ಮಾಡಲಿದೆ.