ಬೆಂಗಳೂರು: ಲಾಬರಿ ರಾಜ್ಯಾಧ್ಯಕ್ಷನೆಂದ ಡಿಸಿಎಂ ಡಿಕೆಶಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತೇವೆ ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ರಾಜ್ಯದ ಜನ ಉತ್ತರಿಸ್ತಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ
ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಾಕಿ ಉಳಿಸಿದ ಹಣ ಬಾಕಿ ಉಳಿಸಿದ್ದರಿಂದ ಹಾಲು ಉತ್ಪಾದನೆಯೂ ಕಡಿಮೆಯಾಗಿದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
BSY ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡ್ತಿದ್ರು ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹ ಆದ್ರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ ಜನ ಅಷ್ಟೇ ಅಲ್ಲ ಜಾನುವಾರುಗಳೂ ಸರ್ಕಾರಕ್ಕೆ ಶಾಪ ಹಾಕ್ತಿವೆ ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದರು.
ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈತೋರಿಸುತ್ತದೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲಿ ರೈತರ ಹಣ ಬಾಕಿ ಉಳಿಸಿಕೊಂಡು ಪಾಪದ ಸರ್ಕಾರವಾಗುತ್ತೆ ಹಣ ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಹೋರಾಟ ಮಾಡ್ತವೆ ಜಿನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗ್ತದೆ ಪದೇಪದೇ ಬಿಜೆಪಿಯವರಿಗೆ ಮಾನಮರ್ಯಾದೆ ಇಲ್ಲವೆಂದು ಬೇಕಿಸ್ತಾರ ನಾನು ಆ ಪದ ಬಳಸಲ್ಲ, ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.