ನವದೆಹಲಿ:– ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ.
ಕೆಲವು ರಾಜ್ಯಗಳು ಮಾಡುತ್ತಿರುವ ತೆರಿಗೆ ತಾರತಮ್ಯ ರಾಜಕೀಯವಾಗಿ ದೂಷಣೆಯಾಗಿದ್ದು, ಇದು ಸತ್ಯವಲ್ಲ. ಕೇಂದ್ರ ಹಣಕಾಸು ಆಯೋಗದ ಶಿಫಾರಸು ಅನ್ವಯ ಅನುದಾನ ನೀಡುತ್ತಿದೆ ಎಂದರು.
ಹಣಕಾಸು ಆಯೋಗವು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದರು. ಮುಂದುವರಿದು ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಕಿಡಿಕಾರಿದರು.
ಯಾವುದೇ ಕೇಂದ್ರ ಹಣಕಾಸು ಸಚಿವರು ಹಣಕಾಸು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನಗೆ ಈ ರಾಜ್ಯ ಇಷ್ಟವಿಲ್ಲ. ತೆರಿಗೆ ಮರುಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಹಣಕಾಸು ಸಚಿವರಿಗೆ ಅಧಿಕಾರ ಇಲ್ಲ. ಸಚಿವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಈ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು.