ನವದೆಹಲಿ:- ದೇಶವನ್ನ ಇನ್ನೆಷ್ಟು ಭಾಗವಾಗಿ ಒಡೆಯುತ್ತೀರಿ ಎಂದು ಹೇಳುವ ಮೂಲಕ ಡಿ.ಕೆ.ಸುರೇಶ್ ಹೇಳಿಕೆಗೆ ಮೋದಿ ಕಿಡಿಕಾರಿದ್ದಾರೆ.
ಕರ್ನಾಟಕಕ್ಕೆ ಅನುದಾನ ನೀಡದಿದ್ದರೆ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಹಿರಂಗವಾಗಿ ದೇಶ ಒಡೆಯುವ ಮಾತನಾಡುತ್ತಾರೆ. ಒಗ್ಗೂಡಿಸುವುದು ಇರಲಿ ಒಡೆಯುವುದು ಮಾತನಾಡುತ್ತಾರೆ. ಇಷ್ಟು ಒಡೆದಿರುವುದು ಸಾಕಾಗಿಲ್ವ, ಇನ್ನು ಎಷ್ಟು ಭಾಗವಾಗಿ ಒಡೆಯುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ನೆಹರೂ ಅವರ ತಪ್ಪಿನಿಂದ ಕಾಶ್ಮೀರದ ಜನರು ಬಹುದೊಡ್ಡ ಬೆಲೆ ತೆರಬೇಕಾಯಿತು ಎಂದು ಕಿಡಿಕಾರಿದ್ದಾರೆ.