ಧಾರವಾಡ- ಕಳೆದ ಜನೆವರಿ 24 ರಂದು ಧಾರವಾಡ ತಾಲೂಕಿನ ತಡಕೋಡ್ ಗ್ರಾಮದಲ್ಲಿ ಸಂಭವಿಸಿದ್ದ ಹಿಂದೂ ಮುಸ್ಲಿಂ ಗಲಾಟೆ ಒ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿರಾಗಿ ಜೈಲಿನಲ್ಲಿದ್ದ ಹಿಂದೂ ಯುವಕರಿಗೆ ಜಾಮೀನು ಮಂಜೂರಾಗಿ ಬಿಡುಗಡೆಯಾಗಿದ್ದು, ಮಾಜಿ ಶಾಸಕ ಅಮೃತ ದೇಸಾಯಿ ಅವರು ಬಿಡುಗಡೆಗೊಂಡ ಯುವಕರನ್ನು ಸ್ವಾಗತ ಮಾಡಿಕೊಂಡರು.
ತಡಕೋಡ ಗ್ರಾಮದ ಸದ್ದಾಂಹುಸೇನ್ ಎಂಬಾತ ಅಯೋಧ್ಯೆ ರಾಮಮಂದಿರದ ಫೋಟೋದ ಮೇಲೆ ಹಸಿರು ಧ್ವಜ, ಓವೈಸಿ ಫೋಟೋ ಹಾಕಿ ಇದು ಇಸ್ಲಾಮಿಕ್ ಪವರ್ ಎಂಬ ಸಂದೇಶ ಹಾಕಿ ಎಡಿಟ್ ಮಾಡಿದ್ದ ಫೋಟೋವನ್ನು ತನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದ. ಇದರಿಂದ ಕೆರಳಿದ್ದ ಹಿಂದೂ ಕಾರ್ಯಕರ್ತರು ನಂತರ ತಡಕೋಡ ಗ್ರಾಮದ ಈದ್ದಾ ಕಟ್ಟಡದ ಗುಂಬಜ್ ಒಡೆದು ಆಕ್ರೋಶ ಹೊರ ಹಾಕಿದ್ದರು. ಅಂದು ಗರಗ ಠಾಣೆ ಪೊಲೀಸರು ಕೆಲ ಹಿಂದೂ ಕಾರ್ಯಕರ್ತರನ್ನೂ ಬಂಧಿಸಿ ಕೇಂದ್ರ ಕಾರಾಗೃಹದಲ್ಲಿಟ್ಟಿದ್ದರು.
ಇಂದು ಎಲ್ಲ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದ್ದು, ಮಾಜಿ ಶಾಸಕ ಅಮೃತ ದೇಸಾಯಿ ಅವರು ಸ್ವತಃ ಕೇಂದ್ರ ಕಾರಾಗೃಹಕ್ಕೆ ತೆರಳಿ ಜೈಲಿನಿಂದ ಬಿಡುಗಡೆಗೊಂಡ ಹಿಂದೂ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ.