ಬೆಂಗಳೂರು: ಗೃಹಿಣಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಲೇಔಟ್ನ (Mahalakshmi Layout) ಶ್ರೀ ಕಂಠೇಶ್ವರ ನಗರದಲ್ಲಿ ನಡೆದಿದೆ.
ಪ್ರೇಮಲತಾ (35) ಸಾವನ್ನಪ್ಪಿದ ಮಹಿಳೆ. ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ಶಿವಶಂಕರ್ ಕೊಲೆ ಮಾಡಿರಬಹುದು ಎಂಬ ಆನುಮಾನವಿದೆ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ನೇಣು ಬಿಗಿಯಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯ ಗಂಡನೇ ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂಬ ಶಂಕೆಯನ್ನು ಪ್ರೇಮಲತಾ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಮಹಾಲಕ್ಷ್ಮಿ ಲೇಔಟ್ನ ಪೊಲೀಸರು ಶಿವಶಂಕರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.