ನವದೆಹಲಿ:- ಕರ್ನಾಟಕಕ್ಕೆ ಬರಬೇಕಿದ್ದ ಅನುದಾನದಲ್ಲಿ ಮೋಸವಾಗಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಯಾ ಪೈಸೆ ಜಿಎಸ್ಟಿ ಬಾಕಿ ಉಳಿಸಿಕೊಂಡಿಲ್ಲ. ಒಟ್ಟಾರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 2.36 ಲಕ್ಷ ಕೋಟಿ ನೀಡುತ್ತಿದೆ ಎಂದರು.
ಹಣಕಾಸು ಆಯೋಗ ಮಾಡಿದ ಶಿಫಾರಸು ಅಂತಿಮವಾಗಿದೆ. ಕರ್ನಾಟಕಕ್ಕೆ ವಿಶೇಷ ಅನುದಾನಕ್ಕೆ ಎಲ್ಲೂ ಶಿಫಾರಸು ಮಾಡಿಲ್ಲ. ಅಂತರರಾಜ್ಯ ಜಿಎಸ್ಟಿ ಶೇಕಡಾ 50ರಷ್ಟು ರಾಜ್ಯಕ್ಕೆ ಹೋಗುತ್ತಿದೆ. ಈ ತೆರಿಗೆ ಪದ್ಧತಿ ನೆಹರೂ ಕಾಲದಿಂದಲೂ ಇದೆ ಕೇಂದ್ರ ಸರ್ಕಾರ ನಯಾ ಪೈಸೆ ಜಿಎಸ್ಟಿ ಬಾಕಿ ಉಳಿಸಿಕೊಂಡಿಲ್ಲ ಎಂದರು.
ರಾಜ್ಯಕ್ಕೆ 6,280 ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ರಾಜ್ಯಕ್ಕೆ 18,000 ಕೋಟಿ ರೂಪಾಯಿ ಅನುದಾನ ನೀಡಲಿದ್ದೇವೆ ಒಟ್ಟಾರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 2.36 ಲಕ್ಷ ಕೋಟಿ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದರು.
ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಜೋಶಿ, ಕಾಂಗ್ರೆಸ್ಸಿಗರು ಅನ್ಯಾಯ ಆಗಿದೆ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಕುಣಿಯಲು ಬರದಿದ್ದರೆ ನೆಲ ಡೊಂಕು ಎಂಬಂತಿದೆ ಸಿಎಂ ವರ್ತನೆ ಎಂದರು.