ಹಾಸನ:– ಕೇಂದ್ರವನ್ನು ದೂರುವುದು ರಾಜ್ಯ ಕಾಂಗ್ರೆಸ್ ಗೆ ಶೋಭೆ ತರಲ್ಲ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು, ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ. ಅಗತ್ಯ ಇದ್ದಾಗಲೆಲ್ಲ ನೆರವು ನೀಡಿದೆ ಎಂದರು.
ಹಾಗಿದ್ದರೆ ಜನರ ತೆರಿಗೆ ಹಣವನ್ನು ಇವರ ಉಚಿತ ಗ್ಯಾರಂಟಿಗೆ ಬಳಸಿದ್ದಾರೆ. ಮುಂದೆ ತೆರಿಗೆ ಪಾವತಿದಾರರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೋರಾಟ ಮಾಡಿದರೆ ಏನು ಮಾಡೋದು ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಅಗತ್ಯ ಇದ್ದಾಗಲೆಲ್ಲ ನೆರವು ನೀಡಿದೆ. ಕೇಂದ್ರದಿಂದ ಅನುದಾನ ಬಂದೇ ಇಲ್ಲ ಎಂಬ ಭಾವನೆ ಮೂಡಿಸುವುದು ತಪ್ಪು ಎಂದು ವಾಗ್ದಾಳಿ ನಡೆಸಿದ್ದಾರೆ
ದಕ್ಷಿಣ ಭಾರತ ಪ್ರತ್ಯೇಕವಾಗಬೇಕು ಎಂಬ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಯನ್ನು ಖಂಡಿಸಿ, ದೇಶ ಒಡೆಯುವ ಹೇಳಿಕೆ ಯಾರೂ ಕೊಡಬಾರದು. ಭಾರತ ಒಂದಾಗಿರುತ್ತದೆ. ಭಾರತೀಯರು ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಇದೆ. ಈ ರೀತಿಯ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದು ತಿರುಗೇಟು ನೀಡಿದ್ದಾರೆ.