ಬೆಂಗಳೂರು:- ಜೇಡರಹಳ್ಳಿ ಕೃಷ್ಣಪ್ಪ ವಿರುದ್ದ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೇಡರಹಳ್ಳಿ ಕೃಷ್ಣಪ್ಪ ಸೇರಿ ಎಂಟು ಜನರ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬ್ಯಾಡರಹಳ್ಳಿ ಠಾಣೆಗೆ ಶಂಕ್ರಪ್ಪ ಎಂಬಾತ ದೂರು ನೀಡಿದ್ದ. ದೂರಿನ ಅನ್ವಯ 506, 341, 34, 504, 406, 420, 465, 468, 471, 323 ಸೆಕ್ಷನ್ ಗಳ ಅಡಿ ಎಫ್ಐಆರ್ ದಾಖಲಾಗಿದೆ.
ಜಮೀನೊಂದರ ಮಾಲೀಕರಾಗಿರೋ ಶಂಕ್ರಪ್ಪ, ಬೆಂಗಳೂರು ಉತ್ತರ ತಾಲೂಕಿನ ಹೇರೋಹಳ್ಳಿ ಗ್ರಾಮದ ಜಮೀನಿನ ಮಾಲೀಕ. 16ಎಕರೆ 37ಗುಂಟೆ ಜಮೀನು ಹೊಂದಿದ್ದ. ಶಂಕರಪ್ಪ ಪಿತ್ರಾರ್ಜಿತ ಆಸ್ತಿಯಾಗಿದ್ದು, ಇತ್ತೀಚೆಗೆ ಭೂ ಕಬಳಿಸಿದ ಆರೋಪ ಕೇಳಿ ಬಂದಿತ್ತು. ತಮ್ಮ ಪಾಲಿನ ನಾಲ್ಕು ಎಕರೆ 13ಗುಂಟೆ ಜಾಗವನ್ನ ಶಂಕರಪ್ಪ ಅಭಿವೃದ್ಧಿ ಮಾಡಿಸ್ತಿದ್ದ.
ಈ ನಡುವೆ ಅಲ್ಲಿಗೆ ಬಂದಿದ್ದ ಕೃಷ್ಣಮೂರ್ತಿ, ಗೋವಿಂದರಾಜು ಹಾಗೂ ಇತರರಿಂದ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ನಮ್ಮ ಹೆಸ್ರಲ್ಲಿ ಜಮೀನಿದೆ.. ಅಭಿವೃದ್ಧಿ ಕೆಲಸ ನಿಲ್ಲಿಸಿ, ಜಾಗ ಖಾಲಿ ಮಾಡುವಂತೆ ಬೆದರಿಕೆ ಆರೋಪ ಬಂದಿದ್ದು, ಇದರಿಂದ ಭಯಭೀತರಾಗಿರೋ ಶಂಕ್ರಪ್ಪರಿಂದ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಲಾಗಿದೆ.
ದೂರಿನ ಅನ್ವಯ ಜೇಡರಹಳ್ಳಿ ಕೃಷ್ಣಪ್ಪನನ್ನ ಬಂಧಿಸಿ ಬ್ಯಾಡರಹಳ್ಳಿ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.