ಹಾವೇರಿ:- ತಾಯಿ ಹಸಿವು ನೋಡಲಾಗದೆ ಯುವಕ ಸೂಸೈಡ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ತಾಯಿ ನಿಲಮ್ಮ ಮಗನ ನೆನದು ಕಣ್ಣೀರು ಹಾಕಿದ್ದಾರೆ. ಅನೈತಿಕ ಸಂಬಂಧವೇ ಮಗನ ಸಾವಿಗೆ ಕಾರಣ. ನನ್ನ ಮಗನಿಗೆ ತಾಯಿ ವಯಸ್ಸಿನ ಹೆಂಗಸಿನ ಜೊತೆ ಅನೈತಿಕ ಸಂಬಂಧ ಇತ್ತು. ಅವಳಿಗೆ ಮದುವೆಯಾಗಿ ಮಕ್ಕಳ್ಳಿದ್ದರೂ ನನ್ನ ಮಗನನ್ನು ಮದುವೆಯಾಗು ಎಂದು ದುಂಬಾಲು ಬಿದ್ದಿದ್ದಳು ಎಂದು ತಿಳಿಸಿದ್ದಾರೆ.
ಪದೇ ಪದೇ ನಮ್ಮ ಊರಿಗೆ ಬಂದು ತೊಂದರೆ ಕೊಡುತ್ತಿದ್ದಳು. ಹೀಗಾಗಿ ನಾವು ನೀವು ಎಲ್ಲಿಯಾದರು ಇರಿ ಚೆನ್ನಾಗಿ ಇರುವಂತೆ ಹೇಳಿದ್ದೆವು. ನಿತ್ಯ ಆ ಹೆಂಗಸು ಮದ್ಯಪಾನ ಮಾಡುತ್ತಿದ್ದಳು. ಅವಳಿಗೆ ಮದ್ಯ ತಂದು ಕೊಡದಿದ್ದರೆ ಗಲಾಟೆ ಮಾಡುತ್ತಿದ್ದಳು. ಅವಳಿಗೆ ತಕ್ಕ ಶಿಕ್ಷಿಯಾಗಬೇಕು ಎಂದು ನೊಂದ ತಾಯಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಂದಗಡ ಠಾಣೆ ಪೊಲೀಸರಿಂದ ಸತ್ಯಾಂಶ ಬಯಲಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಪ್ರತಿಕ್ರಿಯಿಸಿದ್ದು, ತಾಯಿಯ ಹಸಿವಿನ ಪರದಾಟ ನೋಡಲಾರದೇ ಆತ್ಮಹತ್ಯೆ ಎಂಬುದು ಸುಳ್ಳು. ಆತ್ಮಹತ್ಯೆ ಮಾಡಿಕೊಂಡ ಬಸವರಾಜ್ ಮತ್ತು ಮಹಿಳೆ ತಾಯಿ, ಮಗ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ