ತರಕಾರಿಗಳ ಸೇವನೆಯಲ್ಲಿ ಭಾರತೀಯರು ಸದಾ ಮುಂದು ಎಂದು ಹೇಳುತ್ತಾರೆ. ಏಕೆಂದರೆ ಇಲ್ಲಿನ ಪ್ರದೇಶಗಳಲ್ಲಿ ತರಕಾರಿಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ ಮತ್ತು ಜನ ಸಹ ಅದೇ ರೀತಿ ಯಾವುದೇ ಮುಲಾಜಿಲ್ಲದೆ ಕಡಿಮೆ ಖರ್ಚಿನಲ್ಲಿ ಸೇವನೆ ಮಾಡುತ್ತಾರೆ. ಆರೋಗ್ಯದ ವಿಚಾರ ಬಂದಾಗ ನಮಗೆ ಅನುಕೂಲವಾಗಿ ಇರುವಂತಹ ತರಕಾರಿಗಳನ್ನು ಮಾತ್ರ ನಾವು ನೋಡುತ್ತೇವೆ.
ಇದಕ್ಕೆ ಉತ್ತಮ ಉದಾಹರಣೆಯೆಂದರೆ ಅದು ಸುವರ್ಣಗೆಡ್ಡೆ. ಇದರಲ್ಲಿ ಅನೇಕ ಆರೋಗ್ಯಕಾರಿ ಗುಣಗಳು ಅಡಗಿದ್ದು, ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು
ಮಧುಮೇಹದಿಂದ ಬಳಲುತ್ತಿರುವವರು ಸುವರ್ಣ ಗೆಡ್ಡೆಯನ್ನು ತಮ್ಮ ಆಹಾರದಲ್ಲಿ ಸೇರಿಸುವುದರಿಂದ ಉತ್ತಮ ಫಲಿತಾಂಶವನ್ನು ಕಾಣಬಹುದು. ಸುವರ್ಣ ಗೆಡ್ಡೆ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಸುವರ್ಣ ಗೆಡ್ಡೆ ತಿಂದರೆ ದೇಹದಲ್ಲಿರುವ ಕಲ್ಮಶಗಳು, ವಿಷಕಾರಿ ಅಂಶಗಳು ಹೊರ ಹೋಗುತ್ತವೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ನಿತ್ಯವೂ ಸುವರ್ಣ ಗೆಡ್ಡೆ ತಿಂದರೆ ಕರುಳು, ಯಕೃತ್, ಹೊಟ್ಟೆ ಸ್ವಚ್ಛವಾಗಿದ್ದು, ಜೀರ್ಣಕ್ರಿಯೆ ಸರಾಗವಾಗುತ್ತದೆ.
ಅನೇಕ ಜನರು ಹೆಚ್ಚಿದ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಸಮಸ್ಯೆಗಳು, ತೂಕ ಹೆಚ್ಚಾಗುವುದು ಮತ್ತು ಇತರ ಸಮಸ್ಯೆಗಳಿಗೆ ಕಾರಣವಾಗಬಹುದು. ಸುವರ್ಣ ಗೆಡ್ಡೆ ತಿಂದರೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.
ಸುವರ್ಣ ಗೆಡ್ಡೆ ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಇದು ವಿಟಮಿನ್ ಸಿ, ಬಿ 6 ಮತ್ತು ಬೀಟಾ ಕ್ಯಾರೋಟಿನ್ ಅನ್ನು ಹೊಂದಿರುತ್ತದೆ. ಇದು ನಿಮ್ಮ ತ್ವಚೆಯನ್ನು ಮೃದುವಾಗಿಸುತ್ತದೆ ಮತ್ತು ಸುಕ್ಕುಗಳಿಂದ ಮುಕ್ತಗೊಳಿಸುತ್ತದೆ