ಬೆಂಗಳೂರು:- ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ.
ಇವತ್ತು ಸ್ವೀಕರಿಸಿದ ಎಲ್ಲ ಅರ್ಜಿಗಳನ್ನು ಸಾಧ್ಯವಾದಷ್ಟು ಬೇಗ ಇತ್ಯರ್ಥಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಳಮಟ್ಟದಲ್ಲಿ ಅಧಿಕಾರಿಗಳು ಸಮರ್ಥವಾಗಿ ಕೆಲಸ ಮಾಡಿದರೆ ಜನರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಬೆಂಗಳೂರುವರೆಗೆ ಬರುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ಅಧಿಕಾರಿಗಳಲ್ಲಿ ಜಡತ್ವ ಇರಕೂಡದು, ಜಡತ್ವ ತಲೆದೋರಿದರೆ ಸಮಸ್ಯೆಗಳು ತಲೆದೋರುತ್ತವೆ, ಕೆಲಸ ಸರಿಯಾದ ನಿಟ್ಟಿನಲ್ಲಿ ಸಾಗಿದರೆ ಆಡಳಿತ ಯಂತ್ರ ಚುರುಕಾಗಿದೆ ಅಂತ ಜನರಿಗೆ ಮನವರಿಕೆಯಾಗತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಪ್ರಮುಖವಾಗಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಯಾರೇ ಆಗಲಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ, ಜನರಿಗೆ ಅಗೌರವ ತೋರಿದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ಸಿಎಂ ರವಾನಿಸಿದರು.