ದಾವಣಗೆರೆ:- ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂದು ಮಾಜಿ ಶಾಸಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ. ಒಂದು ಕಡೆ ಮೋದಿ ಹಾಗೂ ಹಾಗೂ ಇನ್ನೊಂದು ಕಡೆ ಶ್ರೀರಾಮ ಚಂದ್ರ ಇದು ಬಿಜೆಪಿ ಸಿದ್ದಾಂತ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಕಾಂಗ್ರೆಸ್ನವರಿಗೂ ಹಿಂದು ಧರ್ಮದ ಬಗ್ಗೆ ಗೌರವ ಇದೆ. ಮಾಗಡಿ ಶಾಸಕ ಬಾಲಕೃಷ್ಣ ಒಂದು ಮುತ್ತು. ಬಿಜೆಪಿ ಸಂಸದರು ಗಂಡಸರೇ ಅಲ್ಲಾ ಅಂತಾರೆ. ನಾವು ಗಂಡಸರು ಅಂತಾ ಎಲ್ಲಿ ತೊರಿಸಬೇಕು ಎಂದು ಕಿಡಿಕಾರಿದ್ದಾರೆ.