ಬಳ್ಳಾರಿ: ಸಚಿವರೇ… ಶಾಸಕರೇ…. ಈ ಕಡೆ ಸ್ವಲ್ಪ ಗಮನಹರಿಸಿ.. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವಿದೆ, ಜಿಲ್ಲೆಯಲ್ಲಿ ಕಾಂಗ್ರೇಸ್ ಸರ್ಕಾರವಿದೆ. ಆದರೆ ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಗಳು ಮಾತ್ರ ಬಂದಾಗಿವೆ. ಹೌದು ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗ್ಯಾರಂಟಿ ಎಫೆಕ್ಟ್ʼನಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆಯೇ ಎಂದು ಅನುಮಾನ ಮೂಡುತ್ತಿದೆ. ಸರ್ಕಾರ ಬಾಕಿ ಬಿಲ್ ಪಾವತಿಸದ ಹಿನ್ನೆಲೆ ಬಳ್ಳಾರಿ ನಗರದಲ್ಲಿ 5 ಇಂದಿರಾ ಕ್ಯಾಂಟೀನ್ʼಗಳು ಬಂದ್ ಆಗಿದೆ.
ಒಟ್ಟು ಎಂಟು ಕ್ಯಾಂಟೀನ್ಗಳು ಸೇರಿದಂತೆ 4.5 ಕೋಟಿ ರೂ. ಬಿಲ್ ಬಾಕಿ ಇದೆ. ಪ್ರತಿ ತಿಂಗಳ ಕ್ಯಾಂಟಿನ್ ನಿರ್ವಹಣೆಗೆ ಸುಮಾರು 10 ಲಕ್ಷ ರೂ.ಗಳಿಗೂ ಅಧಿಕ ಹಣ ವ್ಯಯಿಸಬೇಕಿದೆ. ಇದೇ ಕಾರಣಕ್ಕೆ, ಇಂದಿರಾ ಕ್ಯಾಂಟಿನ್ ನಿರ್ವಹಣೆ ವಹಿಸಿಕೊಂಡಿದ್ದ ಎಜೆನ್ಸಿಗಳು ತರಕಾರಿ, ಗ್ಯಾಸ್, ಸಿಬ್ಬಂದಿಗೂ ಕೊಡಲು ಹಣವಿಲ್ಲದೆ ಈಗ ಬಂದ್ ಮಾಡಿದ್ದಾರೆ. ನಗರದ ಮೋತಿ ಸರ್ಕಲ್, ಜಿಲ್ಲಾ ಆಸ್ಪತ್ರೆ, ಎಪಿಎಂಸಿ, ವಿಮ್ಸ್ನಲ್ಲಿರುವ ಐದು ಕ್ಯಾಂಟೀನ್ಗಳನ್ನು ಬಂದ್ ಮಾಡಲಾಗಿದೆ.
ಬಂದ್ ಆಗಿರುವ ಬಳ್ಳಾರಿ ನಗರದ ಐದು ಕ್ಯಾಂಟಿನ್ಗಳಲ್ಲಿ ಪ್ರತಿನಿತ್ಯ ಸಾವಿರಾರು ಜನ ಮುಂಜಾನೆ ಉಪಹಾರ, ಮಧ್ಯಾಹ್ನ ಊಟ ಮಾಡುತ್ತಿದ್ದರು. ಈಗ ಇಂದಿರಾ ಕ್ಯಾಂಟೀನ್ ನೋಡಿ ಹಿಂತಿರುಗಿ ಹೋಗುತ್ತಿರುವ ಸಾರ್ವಜನಿಕರು, ಆಟೋ ಡ್ರೈವರ್ಗಳು, ಕೂಲಿ ಕಾರ್ಮಿಕರು, ವಿಧ್ಯಾರ್ಥಿಗಳು, ಬಡಜನರು ಮತ್ತು ವಯೋವೃದ್ದರು ಹಿಂತಿರುಗಿ ಹೋಗುತ್ತಿದ್ದಾರೆ. ಸದ್ಯ ಕುಡುಕರ ತಾಣವಾಗಿ ಇಂದಿರಾ ಕ್ಯಾಂಟೀನ್ʼಗಳು ಮಾರ್ಪಡುತ್ತಿವೆ. ಆದಷ್ಟು ಬೇಗ ಕ್ಯಾಂಟೀನ್ ತೆರೆಯಬೇಕು ಎಂಬುದು ಜನರ ಒತ್ತಾಯವಾಗಿದೆ.