ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದೇ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಸತ್ನಲ್ಲಿ ರಾಜ್ಯ ಬಿಜೆಪಿ ನಾಯಕರು ಒಟ್ಟಾಗಿ ಸೇರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಸನಗೌಡ ಪಾಟೀಲ್ ಯತ್ನಾಳ್, ಬಿ.ವಿ ನಾಯಕ್, ಮಾಜಿ ಸಚಿವ ರಮೇಶ್ ಜಾರಕಿಹೋಳಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್ಯಾಧ್ಯಕ್ಷರಾದ ನಂತರ ವಿಜಯೇಂದ್ರ ಜೊತೆ ಯತ್ನಾಳ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಫೆ.11ರಂದು ಎರಡು ಗಂಟೆ ಈ ಮಾರ್ಗದಲ್ಲಿ ರೈಲು ಸಂಚಾರ ಇರಲ್ಲ!
ಪಕ್ಷದ ರಾಜ್ಯಮಟ್ಟದ ಕಾರ್ಯಕ್ರಮಗಳಲ್ಲೂ ಯತ್ನಾಳ್ ದೂರ ಉಳಿದಿದ್ದರು. ವಿಜಯಪುರದಲ್ಲಿ ವಿಜಯೇಂದ್ರ ಭೇಟಿ ವೇಳೆಯಲ್ಲೂ ಯತ್ನಾಳ್ ಕಾಣಿಸಿರಲಿಲ್ಲ. ಇಂದು ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಯತ್ನಾಳ್ ಜೊತೆ ಮೊದಲ ಮುಖಾಮುಖಿ ಭೇಟಿಯಾಗಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆ ಮಾತುಕತೆ ವೇಳೆ ಇದು ಆಕಸ್ಮಿಕ ಭೇಟಿಯೋ? ಇಬ್ಬರು ನಾಯಕರ ಮಧ್ಯೆ ನಡೆದ ಸಂಧಾನವೋ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.