ಚಿತ್ರದುರ್ಗ:- ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ ನಡೆಸಿದ ಗುತ್ತಿಗೆ ಆಧಾರಿತ ವೈದ್ಯನನ್ನು ವಜಾ ಮಾಡಲಾಗಿದೆ.
ಡಾ.ಜಗದೀಶ್ ವಜಾಗೊಂಡ ಡಾಕ್ಟರ್. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ ವಿಡಿಯೋ ಮಾಡಲಾಗಿತ್ತು. ನಿಯಮ ಬಾಹಿರ ಕೃತ್ಯ, ಕರ್ತವ್ಯ ಲೋಪ ಹಿನ್ನೆಲೆ ಕೆಲಸದಿಂದ ವಜಾ ಮಾಡಲಾಗಿದೆ. ಡಿಫರೆಂಟ್ ಮತ್ತು ಯುನೀಕ್ ಆಗಿ ಪ್ರಿವೆಡ್ಡಿಂಗ್ ಶೂಟ್ ಮಾಡಿಸುವ ಭರದಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಗುತ್ತಿಗೆ ಆಧಾರಿತ ವೈದ್ಯ ಡಾ.ಅಭಿಷೇಕ್ ಯಡವಟ್ಟು ಮಾಡಿಕೊಂಡಿದ್ದಾರೆ.
ಆಪರೇಷನ್ ನಾಗಪ್ಪ’ ಶೀರ್ಷಿಕೆಯಡಿ ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ಆಪರೇಷನ್ ಥಿಯೇಟರ್ನಲ್ಲಿ ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಲಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಕಿಡಿಕಾರಲಾಗಿದೆ.