ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪುತ್ರ ಮೃಣಾಲ್ ಅವರಿಗೆ ಟಿಕೆಟ್ ನೀಡಬೇಕೆಂದು ನಾನು ಹೇಳಿಲ್ಲ. ಆದರೆ, ಕ್ಷೇತ್ರದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಗೆಲುವಿನ ಸಾಮರ್ಥ್ಯದ ಮಾನದಂಡದ ಮೇಲೆ ಅಭ್ಯರ್ಥಿ ಆಯ್ಕೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ” ತಮ್ಮ ಪುತ್ರ ಮೃಣಾಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಈ ಹಿಂದೆ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿಯವರು ಎಂಎಲ್ಸಿ ಆಗುವ ವೇಳೆಯಲ್ಲೂ ಜಿಲ್ಲೆಯ ಮುಖಂಡರು ಹಾಗೂ ಜನರ ಒತ್ತಾಸೆ ಇತ್ತು ” ಎಂದು ಹೇಳಿದರು.
https://ainlivenews.com/what-is-the-meaning-of-which-color-teddy-bear-doll-here-is-the-information/
” ಈಗಲೂ ಜಿಲ್ಲೆಯ ಜನರ ಅಪೇಕ್ಷೆಯಂತೆ, ಎಲ್ಲಾ ಸಮುದಾಯಗಳ ಮುಖಂಡರು, ತಮ್ಮ ಪುತ್ರ ಸ್ಪರ್ಧಿಸಬೇಕೆಂದು ಅಪೇಕ್ಷೆ ಪಡುತ್ತಿದ್ದಾರೆ. ಆದರೆ, ಅಂತಿಮವಾಗಿ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಗೊತ್ತಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ತಲೆಬಾಗುತ್ತೇವೆ ” ಎಂದರು.