ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿಉವ ಉಭಯ ತಂಡಗಳು ಇದೀಗ ಮುಂಬರಲಿರುವ 3ನೇ ಟೆಸ್ಟ್ಗೆ ಭರ್ಜರಿಯಾಗಿ ಸಿದ್ಧತೆ ನಡೆಸುತ್ತಿದೆ. ಇದೀಗ 3ನೇ ಪಂದ್ಯ ಭಾರಿ ಮಹತ್ವ ಪಡೆದುಕೊಂಡಿದೆ. ಆದರೆ ಭಾರತ ತಂಡದಲ್ಲಿನ ಕೆಲ ಗಾಯದ ಸಮಸ್ಯೆ, ಕೆಲ ಆಟಗಾರರ ಲಭ್ಯತೆಯಿಂದ ತಂಡ ಇನ್ನೂ ಪ್ರಕಟಗೊಂಡಿಲ್ಲ.
ಬಿಸಿಸಿಐ ತಂಡದ ಘೋಷಣೆ ವಿಳಂಬ ಮಾಡಿದೆ. ಈ ಬೆಳವಣಿಗೆ ನಡುವೆ ಪ್ರಮುಖ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದಾರೆ. ಹೀಗಾಗಿ 3ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. ಗಾಯಕ್ಕೆ ತುತ್ತಾಗಿರುವ ಶ್ರೇಯಸ್ ಅಯ್ಯರ್ಗೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.
Raw Milk: ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಸಖತ್ ಡೇಂಜರ್..!
ಹೀಗಾಗಿ 3ನೇ ಟೆಸ್ಟ್ ಪಂದ್ಯದಿಂದ ಶ್ರೇಯಸ್ ಅಯ್ಯರ್ ಹೊರಗುಳಿಸುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅಯ್ಯರ್ ಇದೀಗ 30 ಎಸೆತ ಎದುರಿಸುತ್ತಿದ್ದಂತೆ ಗಾಯದ ನೋವು ಕಾಣಿಸಿಕೊಳ್ಳುತ್ತಿದೆ. ಅಭ್ಯಾಸದ ವೇಳೆ ಈ ಸಮಸ್ಯೆ ಮತ್ತೆ ಕಾಣಿಸಿಕೊಂಡಿದ್ದು, ವೈದ್ಯರು ಕೆಲ ವಾರಗಳ ಕಾಲ ವಿಶ್ರಾಂತಿಗ ಸೂಚಿಸಿದ್ದಾರೆ.