ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯರು ಪ್ರತಿಷಠಾಪನೆ ಮಾಡಿದ ಈಶ್ವರ ಲಿಂಗವಿದೆ. ಈ ಹಿಂದೆ ಕೋರ್ಟ್ ಇಲ್ಲಿ ಪೂಜೆಗೆ ಅನುಮತಿ ನೀಡಿದೆ. ಈ ಜಾಗದಲ್ಲಿ ನಾವು ಶಿವರಾತ್ರಿ ದಿನ ಗುದ್ದಲಿ ಪೂಜೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ.
ನಗರದಲ್ಲಿ (Kalaburagi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಮ್ಮದೇ ಸ್ಥಾನ, ಮುಸ್ಲಿಂ ಸಮುದಾಯ ಅತಿಕ್ರಮಣ ಮಾಡಿಕೊಂಡು, ದರ್ಗಾ ಮಾಡಿ ಉರುಸ್ ನಡೆಸುತ್ತಿದ್ದಾರೆ. ಈ ಜಾಗದಲ್ಲಿ ಪೂಜೆಗೆ ಕೋರ್ಟ್ ಅನುಮತಿ ಕೊಟ್ಟಿದೆ. ನಾವು ಶಿವರಾತ್ರಿ ದಿನ ಇಲ್ಲಿ ಗುದ್ದಲಿ ಪೂಜೆ ನೆರವೇರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಧ್ಯಕ್ಷ ಆರಿಫ್ ಅಲ್ವಿ
ಸಂಸದ ಡಿ.ಕೆ ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ವಿಚಾರವಾಗಿ, ದೇಶ ತುಂಡು ಮಾಡೋದು ದೇಶ ದ್ರೋಹದ ಹೇಳಿಕೆಯಾಗಿದೆ. ದೇಶ ತುಂಡು ಮಾಡೋಕೆ ನಿಮಗೆ ಯಾರು ಹಕ್ಕು ಕೊಟ್ಟಿದ್ದಾರೆ? ಆರ್ಥಿಕತೆ ಹೆಸರಲ್ಲಿ ದೇಶ ತುಂಡು ಮಾಡೋದಾದ್ರೆ, ಸ್ವಾತಂತ್ರ್ಯ ಹೋರಾಟ ಯಾಕೆ ಮಾಡಬೇಕಾಗಿತ್ತು? ನೀವು ಕಾಂಗ್ರೆಸ್ನವರು ಆಗ ಹೋರಾಟ ಮಾಡಿರೋದು, ಇವಾಗ ದೇಶ ಒಡೆಯೋದಕ್ಕಾ ಹೇಗೆ ಎಂದು ಪ್ರಶ್ನಿಸಿದರು.
ಈಗ ದಕ್ಷಿಣ ಭಾರತ ಒಡೆಯೋದು ಎಂದರೆ ಏನು? ಆ ಹಿನ್ನೆಲೆಯಲ್ಲಿ ಈಶ್ವರಪ್ಪ ಒಬ್ಬ ದೇಶಭಕ್ತನಾಗಿ ನೋವು ತಡೆಯಲಾರದೆ ಹೇಳಿದ್ದಾರೆ. ನಾನು ಈಶ್ವರಪ್ಪ ವಿಚಾರ ಬೆಂಬಲಿಸುತ್ತಿದ್ದೇನೆ. ರಾಜಕಾರಣಿಗಳಿಗೆ ಒಂದೇ ಅಸ್ತ್ರ ಇರೋದು, ಪೊಲೀಸ್ ಠಾಣೆ, ಹೆದರಿಸೋದು ಬೇದರಿಸೋದು ಇದೇ ಉದ್ಯೋಗವಾಗಿದೆ. ನೈತಿಕವಾಗಿ, ಬೌದ್ಧಿಕವಾಗಿ ಚರ್ಚೆ ಮಾಡುವ ತಾಕತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.