ಗದಗ: ಸರ್ಕಾರ ನಾಡಿನ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಒತ್ತಾಯಿಸಿ ಗದಗ-ಬೆಟಗೇರಿ ನಗರಸಭೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದ ರೈತರು ಕಂಗಾಲಾಗಿದ್ದಾರೆ. 175ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕು ಘೋಷಣೆ ಮಾಡಿದೆ ಪರಿಹಾರ ಸಿಕ್ಕಿಲ್ಲ, ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ಬಜೆಟ್ ನಲ್ಲಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಸಣ್ಣ ಮತ್ತು ಮಧ್ಯಮ ರೈತರ ಸಾಲಗಳನ್ನು ಸಂಪೂರ್ಣ ಮನ್ನ ಮಾಡಬೇಕು.
ಕೃಷಿ ಪಂಪ್ ಸೆಟ್ಗಳಿಗೆ ಕನಿಷ್ಠ 12 ತಾಸು ತ್ರೀ ಫೇಸ್ ವಿದ್ಯುತ್ ನೀಡಬೇಕು. ಇನ್ನೂ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ತಕ್ಷಣದಿಂದಲೆ ಬಿಡುಗಡೆ ಮಾಡಿ ರೈತರು ಪಡೆದಿರುವ ಕೃಷಿ ಯಂತ್ರೋಪಕರಣಗಳ ಹಾಗೂ ಟ್ಯಾಕ್ಟರ್ ಸಾಲಗಳ ವಸುಲಾತಿಯನ್ನು ಕನಿಷ್ಠ ಒಂದು ವರ್ಷ ತಡೆಹಿಡಿಯಬೇಕು.
ಬರಪೀಡಿತ ಪ್ರದೇಶವೆಂದು ಸಾರಿರುವ ಪ್ರದೇಶಗಳಲ್ಲಿ ಬರ ಪರಿಹಾರವನ್ನು ತಕ್ಷಣ ನೀಡಬೇಕು. ಕೃಷಿ ಉತ್ಪನ್ನಗಳ ವೈಜ್ಞಾನಿಕ ಬೆಂಬಲ ಬೆಲೆಗಳನ್ನು ನಿಗದಿ ಮಾಡಿ ರೈತರ ಬೇಡಿಕೆಗಳನ್ನು ಈಡೇರಿಸುಂತೆ ಒತ್ತಾಯ ಮಾಡಿದ್ರು. ಜಿಲ್ಲಾಧಿಕಾರಿಗಳ ಮೂಲಕ ಸಿ ಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ರು.