ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಲಂನೂರಿ ಶಾಸಕ ಸಂತೋಷ್ ಬಂಗಾರ್ ಅವರು ಹೇಳಿಕೆಯೊಂದನ್ನು ನೀಡಿ ಇದೀಗ ಭಾರೀ ವಿವಾದಕ್ಕೀಡಾಗಿದ್ದಾರೆ. ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದರ ವಿರುದ್ಧ ನಿರ್ದೇಶನಗಳನ್ನು ನೀಡಿದ ಬಳಿಕ ಸಂತೋಷ್ ಬಂಗಾರ್ ಹೇಳಿಕೆಯ ವೀಡಿಯೋ ವೈರಲ್ ಆಗಿದೆ.
Pulse Polio: ಪಲ್ಸ್ ಪೋಲಿಯೋ ಲಸಿಕೆ ಯಾವಾಗ ಎಂದು ಕಾಯುತ್ತಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್!
ವೀಡಿಯೋದಲ್ಲಿ ಏನಿದೆ..?: ಹಿಂಗೋಲಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕರು, ಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಎರಡು ದಿನ ಊಟ ಮಾಡಬೇಡಿ ಎಂದು ಹೇಳಿದ್ದಾರೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕೆಂದು ಪೋಷಕರ ಮುಂದೆಯೇ ಶಾಲಾ ಮಕ್ಕಳನ್ನು ಕೇಳಿದ್ದಾರೆ.
यांना मतदान करण्यासाठी चिमुकल्या विद्यार्थ्यांनी दोन दिवस जेवायचं नाही म्हणजे हे काय महात्मा आहेत का? यांनी लहान मुलांच्या शिक्षणासाठी मतदारसंघात काय दिवे लावले? लहान मुलांचा राजकारणासाठी वापर करणं हा गुन्हा असून याबद्दल या आमदार महाशयांवर कारवाई झाली पाहिजे! pic.twitter.com/eF5a193BDW
— Rohit Pawar (@RRPSpeaks) February 10, 2024
ಶಾಸಕರ ಹೇಳಿಕೆ ವಿರುದ್ಧ ಕಾಂಗ್ರೆಸ್ (Congress) ಮತ್ತು ಶರದ್ ಪವಾರ್ ನೇತೃತ್ವದ ಎನ್ಸಿಪಿ (NCP) ಕಿಡಿಕಾರಿದ್ದು, ಕ್ರಮಕ್ಕೆ ಒತ್ತಾಯಿಸಿವೆ. ಎನ್ಸಿಪಿ-ಎಸ್ಪಿ ವಕ್ತಾರ ಕ್ಲೈಡ್ ಕ್ರಾಸ್ಟೊ ಮಾತನಾಡಿ, ಬಂಗಾರ್ ಅವರು ಶಾಲಾ ಮಕ್ಕಳಿಗೆ ಹೇಳಿರುವುದು ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ. ಆದ್ದರಿಂದ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇತ್ತ ತಮ್ಮ ಪಕ್ಷದ ಶಾಸಕರೊಬ್ಬರು ಶಾಲಾ ಮಕ್ಕಳಿಗೆ ಈ ರೀತಿ ಹೇಳಿಕೆ ನೀಡುತ್ತಿರುವಾಗ ರಾಜ್ಯದ ಶಿಕ್ಷಣ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಕಾಂಗ್ರೆಸ್ ಮುಖಂಡ ವಿಜಯ್ ವಡೆತ್ತಿವಾರ್ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.