ಮಂಗಳೂರು:- ಜೈ ಶ್ರೀರಾಮ್ ಘೋಷಣೆ ಕೂಗಿದ ಮಕ್ಕಳಿಗೆ ಶಿಕ್ಷಕಿ ಧಮ್ಕಿ ಹಾಕಿರುವ ಘಟನೆ ಜರುಗಿದೆ.
ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.
ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದರು. ಈ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಲಾಗಿದೆ ಎನ್ನುವ ಆಡಿಯೋವನ್ನು ತೋರಿಸಿ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.
ಜೆರೋಸಾ ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಮಕ್ಕಳಿಗೆ ಧಮ್ಕಿ ಹಾಕಲಾಗಿದೆ ಎಂದು ವಾಯ್ಸ್ ಮೆಸೇಜ್ ತೋರಿಸಿ ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿ ಆದೇಶಿಸಿದೆ.
ಶ್ರೀರಾಮನಿಗೆ ಅವಹೇಳ ಮಾಡಿದ ಶಿಕ್ಷಕಿ ವಿರುದ್ಧ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದರು. ಶಾಲೆ ವಿರುದ್ಧ ಆಕ್ರೋಶ ಭುಗಿಲೇಲುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮುಖ್ಯ ಶಿಕ್ಷಕಿ, ಪ್ರಕರಣ ಸಂಬಂಧ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಲಿಖಿತ ರೂಪದಲ್ಲಿರುವ ಆದೇಶ ಪ್ರತಿಯನ್ನು ಓದಿದಾಗ ಆಡಳಿತ ಮಂಡಳಿಯು ಪ್ರಕರಣ ಸಂಬಂಧ ತಪ್ಪು ಒಪ್ಪಿಕೊಳ್ಳದಿವುದನ್ನು ಗಮನಿಸಿ ಪ್ರತಿಭಟನಾನಿರತರ ಆಕ್ರೋಶದ ಕಿಚ್ಚು ಹೆಚ್ಚಾಯಿತು.