ಬೆಂಗಳೂರು:– ನಗರದ ಉತ್ತರಹಳ್ಳಿ ಮತ್ತು ಕೆಂಗೇರಿ ಫುಡ್ ಬಳಿ ₹1.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆಹಾರ ನಿರೀಕ್ಷಕ ಮತ್ತು ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜರುಗಿದೆ.
ಶ್ರೀಧರ್ ಮತ್ತು ಮ್ಯಾನೇಜರ್ ಉಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ನ್ಯಾಯಬೆಲೆ ಅಂಡಗಿಗೆ ಲೈಸೆನ್ಸ್ ನೀಡಲು 2.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊದಲು 1 ಲಕ್ಷ ರೂ. ಲಂಚ ಪಡೆದಿದ್ದ ಫುಡ್ ಇನ್ಸ್ಪೆಕ್ಟರ್ ಶ್ರೀಧರ್. ಮುಂಗಡವಾಗಿ ಇಂದು 1 ಲಕ್ಷ ರೂ. ಪಡೆಯುತ್ತಿದ್ದಾಗ ಸಿಕ್ಕಿಬಿದಿದ್ದಾರೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ರಫೀಕ್ ಎಂಬುವವರು ದೂರು ನೀಡಿದ್ದರು. ಸದ್ಯ ಶ್ರೀಧರ್, ಉಮೇಶ್ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ