ಧಾರವಾಡ: ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ನರೇಂದ್ರ ಗ್ರಾಮದಲ್ಲಿ ಫೆ.20 ಹಾಗೂ 21 ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಮಾಜಿ ಶಾಸಕ ಅಮೃತ ದೇಸಾಯಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಗ್ರಾಮದ ಕುಂಭಾಪುರ ಕೆರೆ ಹತ್ತಿರ ಇರುವ ತಿರ್ಲಾಪುರ ಅವರ ಜಾಗದಲ್ಲಿ ಈ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ನಡೆಯಲಿವೆ. ಮ್ಯಾಟ್ ಮೇಲೆ ಕಬ್ಬಡಿ ಆಡಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಕಬಡ್ಡಿ ಪಂದ್ಯಾವಳಿಗಳು ನಡೆದಿವೆ. ಈಗ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಬಡ್ಡಿ ಪಂದ್ಯಾವಳಿ ನಡೆಯಲಿವೆ ಎಂದರು.
ಪಂದ್ಯಾವಳಿಯಲ್ಲಿ ಗೆದ್ದ ಮೊದಲ ತಂಡಕ್ಕೆ 40 ಸಾವಿರ, ದ್ವಿತೀಯ ಬಹುಮಾನ 20 ಸಾವಿರ, ತೃತೀಯ ಹಾಗೂ ಚತುರ್ಥವಾಗಿ ತಲಾ 10 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದರು.
ಪಂದ್ಯಾವಳಿಯಲ್ಲಿ ಭಾಗವಹಿಸುವ ಇಚ್ಛಿಸುವ ತಂಡಗಳು ವಾಟ್ಸಪ್ ಸಂಖ್ಯೆ 8050224333 ಕ್ಕೆ ಸಂಪರ್ಕಿಸಬಹುದು. ಕಾರ್ಯಕ್ರಮದ ಮೊದಲು ಸಂಜೆ 7ಕ್ಕೆ ಸಂಗೀತ ನಿರ್ದೇಶ ಗುರು ಕಿರಣ್ ಹಾಗೂ ನಾ ಡ್ರೈವರ್ ಹಾಡಿನ ಖ್ಯಾತಿಯ ಮಾಳು ನಿಪನಾಳ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.