ಉತ್ತರ ಪ್ರದೇಶ: ದೆಹಲಿ ಮುಖ್ಯಮಂತ್ರಿ ಅವರು ಕುಟುಂಬ ಸಮೇತರಾಗಿ ಅಯೋಧ್ಯೆಯ ಐತಿಹಾಸಿಕ ರಾಮಮಂದಿರಕ್ಕೆ ಭೇಟಿ ನೀಡಿ ಭಗವಾನ್ ರಾಮಲಲ್ಲಾನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಭವ್ಯ ದೇವಾಲಯಕ್ಕೆ ಭೇಟಿ ನೀಡಿದರು. ಉಭಯ ನಾಯಕರ ಕುಟುಂಬದವರೂ ಜೊತೆಗಿದ್ದರು.
ರಾಮಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದ ನಂತರ ನಾನು ವರ್ಣಿಸಲಾಗದ ಶಾಂತತೆಯನ್ನು ಅನುಭವಿಸಿದೆ. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಜನರ ಪ್ರೀತಿ ಮತ್ತು ಭಕ್ತಿಯನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ಪ್ರಾರ್ಥಿಸಿದ್ದೇನೆ ಎಂದು ಸಿಎಂ ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಕ್ತದೊತ್ತಡ ಕಾಡುತ್ತಿದೆಯೇ: ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಸಿಗುತ್ತೆ ಪ್ರಯೋಜನ!
ರಾಮಲಲ್ಲಾನ ದರ್ಶನ ಪಡೆಯುವುದು ನನ್ನ ಬಹುದಿನಗಳ ಆಸೆಯಾಗಿತ್ತು. ದೇಶದ ಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಪಂಜಾಬ್ ಸಿಎಂ ಮಾನ್ ಹೇಳಿದ್ದಾರೆ. ಅಯೋಧ್ಯೆಯ ದೇವಾಲಯದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನೆ’ ಜ.22 ರಂದು ನೆರವೇರಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರೋಕ್ತವಾಗಿ ನಡೆದಿತ್ತು.