ಧಾರವಾಡ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸವನ್ನು ಪ್ರತಿವರ್ಷ ಆಚರಣೆ ಮಾಡುತ್ತ ಬರಲಾಗುತ್ತದೆ. ಅದೇ ರೀತಿ ಮಂಗಳವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸವನ್ನು ಆಚರಣೆ ಮಾಡಲಾಯಿತು. ಧಾರವಾಡ ಜಿಲ್ಲಾಡಳಿತ, ಸಾರಿಗೆ ಇಲಾಖೆ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕಾಲ್ನಡಿಗೆ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
Breaking: ಭಾರತದ ಹಿರಿಯ ಟೆಸ್ಟ್ ಕ್ರಿಕೆಟಿಗ, ಮಾಜಿ ನಾಯಕ ದತ್ತಾಜಿರಾವ್ ಗಾಯಕ್ವಾಡ್ ನಿಧನ!
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಈ ಕಾಲ್ನಡಿಗೆಗೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಸ್ವತಃ ತಾವೂ ಕೂಡ ಕಾಲ್ನಡಿಗೆ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.