ಬೆಂಗಳೂರು:- ಐಪಿಎಲ್ ಬೆಟ್ಟಿಂಗ್ ಹೋಗಲಾಡಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆರ್ ಅಶೋಕ್ ಹೇಳಿದ್ದಾರೆ.
ಐಪಿಎಲ್ ನಡೆಯುವಾಗ ಬೆಂಗಳೂರು ನಗರದಲ್ಲೇ ಪ್ರತಿ ಪಂದ್ಯಕ್ಕೆ 1000 ಕೋಟಿ ರೂ. ಬೆಟ್ಟಿಂಗ್ ನಡೆಯುತ್ತದೆ, ಬೆಟ್ಟಿಂಗ್ ನಡೆಸುವ ಜನ ಕೋಟಿ ಕೋಟಿ ಬೆಲೆ ಬಾಳುವ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಬೆಟ್ಟಿಂಗ್ ನಲ್ಲಿ ತೊಡಗುವವರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ ಎಂದು ಅಶೋಕ ಹೇಳಿದರು. ಜಯನಗರದ ಒಬ್ಬ ಡೆವೆಲಪರ್ 120 ಕೋಟಿ ರೂ ಕಳೆದುಕೊಂಡು ದಿವಾಳಿಯಾಗಿದ್ದಾನೆ ಎಂದು ಹೇಳಿದ ಅವರು ಬಿಟ್ಟಂಗ್ ದಂಧೆ ನಡೆಸುವವರು ಭಾರೀ ಪ್ರಭಾವಶಾಲಿಗಳಾಗಿದ್ದಾರೆ ಮತ್ತು ತಾವು ಗೃಹ ಸಚಿವನಾಗಿದ್ದಾಗ ಸದನದಲ್ಲಿದ್ದವರೇ ಬೆಟ್ಟಿಂಗ್ ದೊರೆಗಳ ಬಗ್ಗೆ ವಕಾಲತ್ತು ಮಾಡಲು ಬಂದಿದ್ದರು ಎಂದು ಹೇಳಿದರು. ಈಗ ರಾಜ್ಯದ ಗೃಹ ಸಚಿವರಾಗಿರುವ ಜಿ ಪರಮೇಶ್ವರ್ ಅವರು ಬೆಟ್ಟಿಂಗ್ ಪಿಡುಗನ್ನು ನಿರ್ಮೂಲ ಮಾಡಲು ಕೆಲ ಕಾಂಕ್ರೀಟ್ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಅಶೋಕ ಮನವಿ ಮಾಡಿದರು.