ಬಳ್ಳಾರಿ:- ಸಿನಿಮೀಯ ರೀತಿಯಲ್ಲಿ ಎಟಿಎಂ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ಬೀದರ್(Bidar) ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ಅವರ ಮಾರ್ಗದರ್ಶನದಲ್ಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಭಾಗಿಯಾಗಿದ್ದು, ಅದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ನಾಲ್ವರು ಪರಾರಿಯಾಗಿದ್ದಾರೆ. ಶಾಹಿದ್ ಕಮಲಖಾನ್(45) ಅಲೀಂ ಅಕ್ಬರ್ ಖಾನ್ (26) ಇಲಿಯಾಸ್ ರೆಹಮಾನ್ ಬಂಧಿತ ಆರೋಪಿಗಳು.
ಬೀದರ್ ಸೇರಿದಂತೆ ಬೆಳಗಾವಿ, ವಿಜಯಪುರ, ಬೆಳೆಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ಕಳ್ಳತನ ಮಾಡಿದ್ದರು. ಇದರಿಂದ ಬರೊಬ್ಬರಿ 1 ಕೋಟಿಗೂ ಅಧಿಕ ಹಣವನ್ನು ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿದ್ದರು.