ಮಂಡ್ಯ:- ಸಕ್ಕರೆ ನಾಡು ಮಂಡ್ಯದಲ್ಲಿ ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ PSI ಹಲ್ಲೆ ನಡೆಸಿದ್ದು, ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಡ್ಯ ಪೂರ್ವ ಠಾಣೆ PSI ಅಯ್ಯನಗೌಡ ಎಂಬುವವರು ಮಂಡ್ಯ ನಗರದ ರೂಪಾದೇವಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ರೂಪಾ ಅವರಿಗೆ ಸೇರಿದ್ದ ಹಸು ಮಹಿಳಾ ಪೇದೆ ಸ್ಕೂಟರ್ಗೆ ಅಡ್ಡ ಬಂದಿತ್ತು. ಈ ವೇಳೆ ಮಹಿಳಾ ಪೇದೆ ವನಜಾಕ್ಷಿ ನಿಯಂತ್ರಣ ತಪ್ಪಿ ಗಾಡಿಯಿಂದ ಬಿದ್ದು ಗಾಯಗೊಂಡಿದ್ದರು. ಚಿಕಿತ್ಸೆ ಪಡೆದ ಬಳಿಕ ರೂಪಾ ಅವರು ತಮಗೆ ಪರಿಹಾರ ನೀಡುವಂತೆ ವನಜಾಕ್ಷಿ ಒತ್ತಡ ಹಾಕಿದ್ದರು. ಹಣ ನೀಡದಿದ್ದಕ್ಕೆ ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಲಾಗಿದೆ. ಮಂಡ್ಯದ ಪೂರ್ವ ಠಾಣೆ ಪಿಎಸ್ಐ ಅಯ್ಯನಗೌಡ ವಿರುದ್ಧ ಹಲ್ಲೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಇನ್ನು ಪೊಲೀಸರ ಥಳಿತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಅಧಿಕಾರ ದುರುಪಯೋಗಪಡಿಸಿಕೊಂಡು ಮಹಿಳೆ ಕೈ ಕಾಲಿಗೆ ಹಿಗ್ಗಾಮುಗ್ಗ ಥಳಿಸಿರುವ ಆರೋಪ ಕೇಳಿ ಬಂದಿದೆ. ಗಾಯಾಳು ಮಹಿಳೆಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಹಲ್ಲೆಗೊಳಗಾದ ಮಹಿಳೆಯ ನೆರವಿಗೆ ಧಾವಿಸಿದ ಹೋರಾಟಗಾರರು ಇಂದು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.