ಮಂಡ್ಯ: ಮತ್ತೆ ಸದ್ದು ಮಾಡಲಿದಿಯಾ ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆ? ಟ್ರಯಲ್ ಬ್ಲಾಸ್ಟಿಂಗ್ ಗೆ ಸದ್ದಿಲ್ಲದೆ ಸರ್ಕಾರ ತಯಾರಿ ಮಾಡಲಾಗಿದೆ ಎನ್ನುವು ಅನುಮಾನ ಶುರುವಾಗಿದೆ. ಹೌದು KRS ಡ್ಯಾಂನಿಂದ ಕೇವಲ ಐದಾರು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಮತ್ತೆ ಕಲ್ಲು ಗಣಿಗಾರಿಕೆ ಸದ್ದು ಮಾಡಲಿದೆ ಎಂಬ ಮಾಹಿತಿ ಮೂಲಗಳಿಂದ ದೊರತಿದೆ. ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ಗೆ ಸರ್ಕಾರ ಸದ್ದಿಲ್ಲದೆ ತಯಾರಿ ನಡೆಸಿರುವುದೇ ಈ ಅನುಮಾನಕ್ಕೆ ಕಾರಣವಾಗಿದೆ.
ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟಿಂಗ್ಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಆರ್ಎಸ್ ಅಣೆಕಟ್ಟೆಗೆ ಹಾನಿಯಾಗಬಹುದು ಎಂಬ ಕಾರಣದಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸ ಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿತ್ತು. ಡ್ಯಾಂ ಸುತ್ತಮುತ್ತ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಇತ್ತೀಚೆಗಷ್ಟೆ ಹೈಕೋರ್ಟ್ ಸಹ ಆದೇಶ ನೀಡಿತ್ತು.
Lizard Falling Meaning: ಹಲ್ಲಿ ಮೈ ಮೇಲೆ ಬಿದ್ದರೆ ಶುಭವೋ? ಅಶುಭವೋ? ಇಲ್ಲಿದೆ ನೋಡಿ ಉತ್ತರ
ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಜನವರಿ 8ರಂದು ಆದೇಶ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿತ್ತು. ಈಗ ಕಾಂಗ್ರೆಸ್ ಸರ್ಕಾರದಿಂದ ಮತ್ತೆ ಟ್ರಯಲ್ ಬ್ಲಾಸ್ಟಿಂಗ್ ಗ್ರೀನ್ ಸಿಗ್ನಲ್ ನೀಡಲಾಗಿದೆ. ಮುಂದಿನ ತಿಂಗಳು ತಜ್ಞರ ತಂಡದಿಂದ ಬೇಬಿ ಬೆಟ್ಟ ಹಾಗೂ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ನಡೆಯಲಿದೆ. ಟ್ರಯಲ್ ಬ್ಲಾಸ್ಟ್ ನಂತರ ಸಿದ್ಧಪಡಿಸುವ ವರದಿ ಆಧರಿಸಿ ಗಣಿಗಾರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.