ಹುಬ್ಬಳ್ಳಿ: ಸಿದ್ದರಾಮಯ್ಯ ಸುಳ್ಳು ಹೇಳೋದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಮೊದಲು NDRF ಫಂಡ್ ನಲ್ಲಿ ಇಷ್ಟು ಪ್ರಮಾಣದ ಹಣ ಕೊಡತಿಲ್ಲ. ನಾವು ಅಡ್ವಾನ್ಸ್ ಹಣ ಕೊಡ್ತೀದ್ದೇವೆ. ಯಡಿಯೂರಪ್ಪ ಅದೇ ಹಣವನ್ನು ಬರಗಾಲ ಬಂದಾಗ ಹಂಚಿಕೆ ಮಾಡಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತೀದಾರೆ. ನಾವ ಒಂದೇ ಒಂದು ರೂಪಾಯಿ GST ಹಣ ಕೊಡೋದು ಬಾಕಿ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, NDRF ನಲ್ಲಿ ನಾವು 12 ಸಾವಿರ ಕೋಟಿ ಕೊಟ್ಟಿದ್ದೇವೆ. ಡೆವಲೂಷನ್ ಫಂಡ್ ಅವರ ಕಾಲದಲ್ಲಿ 60 ಸಾವಿರ ಕೋಟಿ. ನಮ್ಮ ಕಾಲದಲ್ಲಿ 2 ಲಕ್ಷ 36 ಸಾವಿರ ಕೋಟಿ ಕೊಟ್ಟಿದ್ದೇವೆ. ತೆರಿಗೆ ಹಂಚಿಕೆಯಲ್ಲಿ 10 ವರ್ಷದಲ್ಲಿ 81 ಸಾವಿರ ಕೋಟಿ, ನಮ್ಮ ಕಾಲದಲ್ಲಿ 2 ಲಕ್ಷ 85 ಸಾವಿರ ಕೋಟಿ ಕೊಟ್ಟಿದ್ದೇವೆ. ಇವರು ಯಾವುದೇ ಗ್ರ್ಯಾಂಟ್ ಕೊಟ್ಟಿಲ್ಲ ಅಂತೀದಾರೆ. ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. 2004 ರಿಂದ 2014 ರಲ್ಲಿ 1667 ಕೋಟಿ ಬಿಡುಗಡೆಯಾಗಿತ್ತು ಎಂದರು.
ಸಿದ್ದರಾಮಯ್ಯ ಸುಳ್ಳು ಹೇಳತೀದಾರೆ, ಅವರು ಸುಳ್ಳು ರಾಮಯ್ಯ. ನಾನು ನಿನ್ನೆ ಇಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯಯುತ್ತಿದ್ದೇನೆ. ಮಹದಾಯಿ ವಿಚಾರ ಅರಣ್ಯ ಇಲಾಖೆ ನಿರಾಕರಣೆ ಮಾಡಿಲ್ಲ ಎಂದ ಅವರು, ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಕೃಷಿ ಸಚಿವರು ಅವರ ಜೊತೆ ಮಾತುಕತೆ ಮಾಡ್ತೀದಾರೆ. ರೈತರ ಹೊಸ ಬೇಡಿಕೆ ಇಟ್ಟಿದ್ದಾರೆ. ನಮ್ಮ ಸರ್ಕಾರ ಬೇಡಿಕೆ ಪರಿಶೀಲನೆ ಮಾಡ್ತೀದಾರೆ. ನಮ್ಮ ಸರ್ಕಾರ ಸಹಾನಭೂತಿಯಿಂದ ಎಲ್ಲ ಬೇಡಿಕೆ ಪರಿಶೀಲನೆ ಮಾಡ್ತೀದಾರೆ. ಕಲ್ಲು ಹೊಡೆಯೋದು ಕೆಲಸವಲ್ಲ. ರೈತರ ಬಗ್ಗೆ ನಾವ ಸಹಾನುಭೂತಿ ಇಂದ ಇದ್ದೇವೆ. ರೈತರು ಮಾತುಕತೆಗೆ ಬರಬೇಕು. ನಾವು ಪ್ರತಿಭಟನೆಯನ್ನು ಹತ್ತಿಕ್ಕೋ ಕೆಲಸ ಆಗತಿಲ್ಲ. ಅನುಮತಿ ಇಲ್ಲದೆ ಬಂದರನ್ನು ತಡೆಯೋ ಕೆಲಸ ಆಗ್ತಿದೆ. ನಮ್ಮ ದೇಶದ ಪ್ರಜೆಗಳನ್ನು ಉಳಿಯೋ ಕೆಲಸ ಆಗ್ತಿದೆ ಎಂದು ಅವರು ಹೇಳಿದರು.
ಶಾರುಖ್ ಖಾನ್ ಅವರ ಜೊತೆ ಮಾತಾಡಿರೋ ವಿಷಯ ನನ್ನ ಗಮನಕ್ಕೆ ಇಲ್ಲ. ಸಿದ್ದರಾಮಯ್ಯ ಹೇಳೋದೆ ಸುಳ್ಳು. ಹಾಗಿದ್ದರೆ ಅವರು ಹತ್ತು ಸಲ ರಾಜಕೀಯ ನಿವೃತ್ತಿಯಾಗಬೇಕು. ಅನುದಾನದ ವಿಚಾರವಾಗಿ ಅವರ ಡ್ಯಾಶ್ ಬೋರ್ಡ್ ನಲ್ಲಿ ಎಲ್ಲ ಮಾಹಿತಿ ಹಾಕಿದ್ರು. ನಾವು ಅದನ್ನು ಡೌನಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಇದೀಗ ಅಂಕಿ ಸಂಖ್ಯೆಯೇ ಡಿಲೀಟ್ ಆಗಿದೆ ಎಂದು ಜೋಶಿ ಗಂಭೀರ ಆರೋಪ ಮಾಡಿದರು.
ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ, ನಾನು ಗೆಲ್ತೀನಿ. ಜೆಡಿಎಸ್ ಬಿಜೆಪಿ ಸೀಟು ಹಂಚಿಕೆ ಯಾವುದು ಚರ್ಚೆಯಾಗಿಲ್ಲ. ಈಗ ಮಾತಾಡೋದು ಕೇವಲ ಉಹಾಪೋಹ ಅಷ್ಟೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಎಲ್ಲವೂ ಅಂತಿಮವಾಗಲಿದೆ. ಒಂದು ಹಂತದಲ್ಲಿ ಕೇಂದ್ರದಲ್ಲಿ ಚರ್ಚೆ ನಡೀತಿದೆ, ಅದೆಲ್ಲವೂ ಅಪೂರ್ಣ ಆಗಿದೆ. ಕಾರ್ಯಕಾರಿಣಿ ನಂತರವೇ ಎಲ್ಲವೂ ಅಂತಿಮವಾಗಲಿದೆ ಎಂದರು. ಯತ್ನಾಳ, ವಿಜಯೇಂದ್ರ ಜಾರಕಿಹೊಳಿ ಜೊತೆ ಸಭೆ ವಿಚಾರವಾಗಿ ಮಾತನಾಡಿದ ಅವರು, ಅವರು ಒಂದೇ ಕಡೆ ಸೇರಿದ್ರೆ ನಿಮಗೇನೂ ಸಮಸ್ಯೆ ಎಂದು ಹಾಸ್ಯ ಚಟಾಕಿ ಹಾರಿಸಿದ ಜೋಶಿ, ಆ ಬಗ್ಗೆ ನಾನು ಇನ್ನೊಂದು ಸಾರಿ ಮಾತಾಡ್ತೀನಿ ಎಂದು ಅವರು ಹೇಳಿದರು.