ಬೆಂಗಳೂರು:– ನನ್ನ ತೆರಿಗೆ ನನ್ನ ಹಕ್ಕು’ಅಭಿಯಾನದ ಬಗ್ಗೆ ಸಾರ್ವಜನಿಕರ ಪ್ರಶ್ನೆಗಳಿಗೆ ಅಂಕಿ-ಸಂಖ್ಯೆ ಸಮೇತ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿದ್ದಾರೆ.
ಟ್ವೀಟರ್ ನಲ್ಲಿ ಲೈವ್ ನಲ್ಲಿ ಮಾತನಾಡಿದ ಅವರು, ಕಾರ್ಪೊರೇಟ್ ಕಂಪನಿಗಳ ಮೇಲಿನ ತೆರಿಗೆ ಪ್ರಮಾಣ ಶೇ.22.5ಕ್ಕೆ ಇಳಿಸಿದರು. ಜನಸಾಮಾನ್ಯರ ಮೇಲೆ ತೆರಿಗೆ ಪ್ರಮಾಣ ಹೆಚ್ಚಳ ಮಾಡಿದ್ದಾರೆ. ಸಾಮಾನ್ಯರಿಂದ ತೆರಿಗೆ ವಸೂಲಿ ಹೆಚ್ಚು ಮಾಡುತ್ತಲೇ ಹೋಗುತ್ತಿದ್ದಾರೆ. ನಮ್ಮ ಸಂಸದರು ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ GST ಪ್ರಮಾಣ ಕಡಿಮೆಮಾಡಿ. ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ GST ಹೆಚ್ಚಿಸಬೇಕು. ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಗುಜರಾತ್ ಸಿಎಂ ಆಗಿದ್ದಾಗ 50% ತೆರಿಗೆ ಪಾಲು ಕೊಡಿ ಎಂದಿದ್ದರು.
ರಾಜ್ಯಗಳು ಭಿಕ್ಷುಕರಾ ಎಂದು ನರೇಂದ್ರ ಮೋದಿಯವರು ಕೇಳಿದ್ದರು. ಕೇಂದ್ರ ಸರ್ಕಾರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ, ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ಳುತ್ತೇವೆ ಎಂದು ಇದೇ ಮೋದಿ ಹೇಳಿದ್ದರು. ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ
ಅಭಿಯಾನ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸದನದಲ್ಲಿ ಪದೇಪದೆ ಹೇಳಿದ್ದೆ. ಸಿಎಂ ಆಗಿದ್ದ ಯಡಿಯೂರಪ್ಪ, ಬೊಮ್ಮಾಯಿ ರಾಜ್ಯದ ಪಾಲನ್ನು ತರಲು ಯತ್ನಿಸಲಿಲ್ಲ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನಿಸದೆ ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದಿದ್ದಾರೆ.
ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸ್ಪಷ್ಟಪಡಿಸಿದರು. ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯವ ಭಾಷೆಯನ್ನಾದರೂ ಕಲಿಯಬಹುದು ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅತಿ ಹೆಚ್ಚು ತೆರಿಗೆ ಕಟ್ಟುವ ನಮ್ಮ ರಾಜ್ಯಕ್ಕೆ ಅನ್ಯಾಯ ಆಗದಂತೆ ತಡೆಯಲು ಸಂವಿಧಾನ ತಿದ್ದುಪಡಿ ಮಾಡಿ ಸೆಸ್ ಮತ್ತು ಸರ್ ಚಾರ್ಜ್ನಲ್ಲೂ ನಮಗೆ ಪಾಲು ಕೊಡಬೇಕೆಂದು ಒತ್ತಾಯಿಸಿದರು.