ವಿಧಾನಪರಿಷತ್: ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನಲ್ಲಿ ಭಾರೀ ಅನ್ಯಾಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು ವಿಧಾನಪರಿಷತ್ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ, ಕೋಲಾಹಲ, ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪಗಳು ನಡೆದು ಸದನವನ್ನು ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಅವರು ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನ ಮೊತ್ತದ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಸದನದಲ್ಲಿ ಸುದೀರ್ಘ ಉತ್ತರ ನೀಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದಿಂದ ನಮಗೆ ಒಟ್ಟು 11,495 ಕೋಟಿ ಹಣ ಬರಬೇಕು. ಆದರೆ ಒಂದೇ ಒಂದು ರೂಪಾಯಿಯೂ ಕೊಡದಿರುವ ಕಾರಣ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ ಎಂದು ಆರೋಪಿಸಿದರು.
ಈ ವೇಳೆ ಬಿಜೆಪಿ ಸದಸ್ಯ ರುದ್ರಗೌಡ ಅವರು ಎದ್ದುನಿಂತು ಮಾತನಾಡಲು ಮುಂದಾಗುತ್ತಿದ್ದಂತೆ ಸಿಡಿಮಿಡಿಗೊಂಡ ಸಿದ್ದರಾಮಯ್ಯಘಿ, ನಾನಿನ್ನು ಉತ್ತರವನ್ನೇ ಮುಗಿಸಿಲ್ಲ. ಏಯ್ ಕುಳಿತುಕೊಳ್ಳಿ ಎಂದು ಏರಿದ ಧ್ವನಿಯಲ್ಲಿ ಗದರಿಸಲು ಮುಂದಾದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಈ ರೀತಿ ಮಾತನಾಡುವುದು ಸರಿಯಲ್ಲಘಿ. ಸದಸ್ಯರಿಗೆ ನಿರ್ದೇಶನ ನೀಡುವ ಅಧಿಕಾರ ಸಭಾಪತಿಗಳಿಗೆ ಮಾತ್ರ ಇರುತ್ತದೆ. ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮುಖ್ಯಮಂತ್ರಿ ಬೆಂಬಲಕ್ಕೆ ಕಾಂಗ್ರೆಸ್ ಸದಸ್ಯರು ನಿಂತರೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಒಂದಾಗಿ ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು.
ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಮಾತನಾಡಿ, ಒಂದು ಪ್ರಶ್ನೆಗೆ 5ಕ್ಕಿಂತ ಹೆಚ್ಚು ನಿಮಿಷ ಸಮಯ ಉತ್ತರ ನೀಡುವಂತಿಲ್ಲಘಿ. ಇದು ಉತ್ತರವೋ ಇಲ್ಲ ಭಾಷಣವೋ, ಅವರ ಪ್ರತಿಯೊಂದು ಮಾತಿನಲ್ಲೂ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡೇ ಮಾತನಾಡುತ್ತಿದ್ದಾರೆ. ನಮ್ಮ ಬಳಿಯೂ ದಾಖಲೆಗಳಿವೆ. ಮುಖ್ಯಮಂತ್ರಿಗಳು ಸುಳ್ಳು ಹೇಳಿ ಸದನದ ದಿಕ್ಕು ತಪ್ಪಿಸುವುದು ಬೇಡ ಎಂದು ಆಗ್ರಹಿಸಿದರು.
ನಿಮ್ಮ ಬಳಿ ದಾಖಲೆಗಳಿದ್ದರೆ ಹಣಕಾಸು ಆಯೋಗಕ್ಕೆ ಕೊಡಿ. ನೀವು ಏಳು ಕೋಟಿ ಕನ್ನಡಿಗರ ಪರವಾಗಿ ಇದ್ದೀರೋ ಇಲ್ಲವೇ ಕನ್ನಡಿಗರ ವಿರೋಧಿಗಳೋ? ಮೊದಲು ಅದನ್ನು ಬಹಿರಂಗಪಡಿಸಿ. ಸತ್ಯಘಿ ಸತ್ಯವೇ. ಸುಳ್ಳು ಸುಳ್ಳೇ. ನೀವು ಎದ್ದು ನಿಂತು ಮಾತನಾಡಿದರೆ ನಾವು ಬಾಯಿಮುಚ್ಚಿಕೊಂಡು ಕೂರುವುದಿಲ್ಲಘಿ. ಇಂತಹ ಗೂಂಡಾಗಿರಿ ವರ್ತನೆಗೆ ನಾನು ಜಗ್ಗುವುದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ನಾವು ತೆರಿಗೆ ಪಾಲನಷ್ಟೇ ಕೇಳುತ್ತಿz್ದÉೀವೆ. ಕೇಂದ್ರ ಸರ್ಕಾರದ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿಲ್ಲಘಿ. ಇದರಲ್ಲಿ ಯಾವುದೇ ರಾಜಕೀಯವೂ ಇಲ್ಲಘಿ. ನಮ್ಮ ತೆರಿಗೆ ಪಾಲಿನ ಹಣವನ್ನು ನಮಗೆ ಕೊಡಿ ಎಂದು ಕೇಳುವುದು ತಪ್ಪೇಘಿ? ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಕೊಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ಕೊಟ್ಟಿದ್ದರು. ಸಾಲದಕ್ಕೆ ಮಾಜಿ ಸಿಎಂ ಬೊಮ್ಮಾಯಿ ಅವರು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಇದುವರೆಗೂ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲಘಿ. ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟಕದ ಜನತೆ ನಿಮಗೆ ಛೀ, ತೂ ಎಂದು ಉಗಿಯುತ್ತಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲಘಿ. ಸದನದಲ್ಲಿ ನೀವು ಜೋರು ಮಾಡಿದ ತಕ್ಷಣ ನಾನು ಬಾಯಿ ಮುಚ್ಚಿಕೊಂಡು ಕೂರುವುದಿಲ್ಲಘಿ. ಸತ್ಯವನ್ನು ಯಾರಿಂದಲೂ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲಘಿ. ಇನ್ನು ಎಷ್ಟು ದಿನ ಇಂಥ ಸುಳ್ಳು ಹೇಳಿಕೊಂಡು ತಿರುಗುತ್ತೀರಿ. ನಿಮ್ಮ ಗೂಂಡಾ ವರ್ತನೆಗೆ ನಾನು ಸುಮ್ಮನಿರಬೇಕೇ? ಎಂದು ಪ್ರಶ್ನಿಸಿದರು.
ನಾವು ಯಾವುದೇ ವಿಷಯದಲ್ಲಿ ಚರ್ಚೆಗೆ ಸಿದ್ದರಿz್ದÉೀವೆ. ಬಿಜೆಪಿಯವರಿಗೆ ಸತ್ಯ ಹೇಳಿದರೆ ಆಗುವುದಿಲ್ಲ. ಅವರದ್ದು ಸುಳ್ಳಿನ ಕಂತೆ ಎಂದು ಟೀಕಾ ಪ್ರಹಾರ ನಡೆಸಿದರು.
ಈ ವೇಳೆ ಕೋಟಾ ಶ್ರೀನಿವಾಸ್ ಪೂಜಾರಿ, ಗೂಂಡಾಗಿರಿ ಎಂಬ ಪದ ಬಳಸಿದ್ದು ಸರಿಯಲ್ಲ. ವಿಧಾನಸೌಧದಲ್ಲಿ ತೊಡೆ ತಟ್ಟಿದವರು ಯಾರು ಎಂಬುದು ಗೊತ್ತಿದೆ. ನಮ್ಮ ಬಳಿಯೂ ದಾಖಲೆಗಳಿವೆ. ನಾವು ಚರ್ಚೆಗೆ ಸಿದ್ದ ಎಂದು ತಿರುಗೇಟು ನೀಡಿದರು.
ಈ ವೇಳೆ ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಘೋಷಣೆ ಕೂಗಿದರು. ಆಗ ಸಭಾಪತಿಯವರು ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಮಾತನಾಡಲು ಅವಕಾಶ ಕೊಡುತ್ತಿದ್ದಂತೆ, ನಾನು ಇನ್ನು ಉತ್ತರ ಕೊಡಬೇಕು. ಪ್ರಶ್ನೆ ಕೇಳಿದವರು ಸುಮ್ಮನಿದ್ದಾರೆ. ನೀವು ಅದ್ಹೇಗೆ ಮಾತನಾಡಲು ಅವಕಾಶ ಕೊಡುತ್ತೀರಿ ಎಂದು ಸಭಾಪತಿಗಳನ್ನು ಪ್ರಶ್ನಿಸುತ್ತಿದ್ದಂತೆ ಸದನದಲ್ಲಿ ಮತ್ತೆ ಗದ್ದಲ ಉಂಟಾಯಿತು. ಬಳಿಕ ಸಭಾಪತಿ ಸದನವನ್ನು ಕೆಲಕಾಲ ಮುಂದೂಡಿದರು.
ಪಿಆರ್4
ಬೆಂಗಳೂರು,É.15- ಕೇಂದ್ರ ಸರ್ಕಾರದ 14 ಮತ್ತು 15ನೇ ಹಣಕಾಸು ಆಯೋಗದ ಶಿÁರಸ್ಸಿನಂತೆ ರಾಜ್ಯಕ್ಕೆ 11,495 ಕೋಟಿ ಹಣ ಬರಬೇಕಾಗಿದ್ದು , ಇದುವರೆಗೂ ಒಂದೇ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಶಿÁರಸ್ಸಿನಲ್ಲಿ 5, 495 ಕೋಟಿ, ಬೆಂಗಳೂರಿನ ಪೆರಿಪಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ 6 ಸಾವಿರ ಕೋಟಿ ಸೇರಿದಂತೆ 15ನೇ ಹಣಕಾಸು ಆಯೋಗದ ಅಂತಿಮ ಶಿÁರಸ್ಸಿನಂತೆ 11495 ಕೋಟಿ ಹಣ ಬರಬೇಕು. ಆದರೂ ನಮ್ಮ ಪಾಲಿನ ಹಣವನ್ನು ಬಿಡುಗಡೆ ಮಾಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನದ 7ನೇ ಷೆಡುಲ್ಯು ಪ್ರಕಾರ ಹಣಕಾಸು ಆಯೋಗವನ್ನು ರಚನೆ ಮಾಡಲಾಗುತ್ತದೆ. ಇದರಲ್ಲಿ ಜನಸಂಖ್ಯೆ ವಿಸ್ತೀರಣ, ತಲಾ ಆದಾಯ, ಅರಣ್ಯಘಿ ಹೀಗೆ ಹತ್ತು ಹಲವು ಮಾನದಂಡಗಳನ್ನು ಆಧಾರವಾಗಿಟ್ಟುಕೊಂಡು ಆಯಾ ರಾಜ್ಯಗಳಿಗೆ ತೆರಿಗೆ ಪಾಲನ್ನು ನಿಗದಿಪಡಿಸಲಾಗುತ್ತದೆ.
ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ 2ನೇ ಸ್ಥಾನದಲ್ಲಿದೆ. 2018-19ರಲ್ಲಿ ಕೇಂದ್ರದ ಬಜೆಟ್ ಗಾತ್ರ 24,42, 000 ಕೋಟಿ ಇತ್ತುಘಿ. 2023-24ನೇ ಸಾಲಿನಲ್ಲಿ ಬಜೆಟ್ ಗಾತ್ರ 42 ಲಕ್ಷ ಕೋಟಿಗೂ ಅಧಿಕವಾಗಿದೆ ಎಂದರು.
2018-19ರಲ್ಲಿ ರಾಜ್ಯದ ತೆರಿಗೆ ಪಾಲು ಹೆಚ್ಚಳವಾಗಿದೆ. ಅಲ್ಲದೆ ಕೇಂದ್ರ ಸರ್ಕಾರದ ಬಜೆಟ್ ಗಾತ್ರವು ದ್ವಿಗುಣ ಮುಂದಾಗಿದೆ. ತೆರಿಗೆ ಪಾಲಿಗನುಗುಣವಾಗಿ ರಾಜ್ಯಕ್ಕೆ ನೀಡಬೇಕು. 14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ.4.71ರಷ್ಟು ಅನುದಾನ ಬಂದಿತ್ತುಘಿ. 15ನೇ ಹಣಕಾಸು ಆಯೋಗದಲ್ಲಿ 3.64ರಷ್ಟು ಬಂದಿದೆ. ಅಂದರೆ ನಮ್ಮ ತೆರಿಗೆ ಪಾಲು ಶೇ.1.07ರಷ್ಟು ಕಡಿಮೆಯಾಗಿದೆ ಎಂದು ಅಂಕಿ ಅಂಶಗಳ ವಿವರ ನೀಡಿದರು.
ಕರ್ನಾಟಕ ಪ್ರತಿ ವರ್ಷ ಕೇಂದ್ರಕ್ಕೆ 4,30,000 ಕೋಟಿ ತೆರಿಗೆಯನ್ನು ಪಾವತಿಸುತ್ತದೆ. 2023-24ರಲ್ಲಿ ರಾಜ್ಯಕ್ಕೆ ನೇರ ತೆರಿಗೆ ಪಾಲು 37,252 ಹಾಗೂ ಕೇಂದ್ರ ಪುರಸ್ಕøತ ಯೋಜನೆಗಳಿಂದ 13,500 ಕೋಟಿ ಸೇರಿದಂತೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟು 50,257 ಕೋಟಿ ಅನುದಾನ ಬಂದಿದೆ ಎಂದರು.
ರಾಜ್ಯ ಸರ್ಕಾರ 100 ರೂ. ತೆರಿಗೆ ಪಾವತಿಸಿದರೆ ಕೇಂದ್ರದಿಂದ ನಮಗೆ ವಾಪಸ್ ಬರುವುದು 12ರಿಂದ 13 ರೂ. ಮಾತ್ರಘಿ. ಇಷ್ಟು ದೊಡ್ಡ ಮಟ್ಟದಲ್ಲಿ ಅನ್ಯಾಯವಾದರೆ ಅಭಿವೃದ್ದಿ ಸಾಧ್ಯವಿಲ್ಲಘಿ. ನಾವು ಅದಕ್ಕಾಗಿಯೇ ನಮ್ಮ ಪಾಲಿನ ತೆರಿಗೆಯನ್ನು ಕೊಡಿ ಎಂದು ಪ್ರತಿಭಟನೆ ಮಾಡಿದ್ದೆವು. ಇದು ಕೇಂದ್ರದ ವಿರುದ್ಧವಾಗಲಿ ಅಥವಾ ಪ್ರಧಾನಿ ಮೋದಿ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಘಿ. ಇದರಲ್ಲಿ ರಾಜಕೀಯವನ್ನೂ ಬೆರೆಸಿಲ್ಲಘಿ. ನಮ್ಮ ತೆರಿಗೆ ಪಾಲಿನ ಹಕ್ಕನ್ನು ನಮಗೆ ಕೊಡಿ ಎನ್ನುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಈ ಹಿಂದೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ನೀಡುವಂತೆ ಮನವಿ ಮಾಡಿದ್ದೆವು. 14- 15ನೇ ಹಣಕಾಸು ಆಯೋಗದ ಶಿÁರಸ್ಸಿನಂತೆ ರಾಜ್ಯಕ್ಕೆ ಬಾಕಿ ಇರುವ 11,495 ಕೋಟಿ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಅನೇಕ ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲಘಿ.
ಹಣಕಾಸು ಆಯೋಗ ಒಂದು ಸ್ವಾಯತ್ತ ಸಂಸ್ಥೆ. ಇದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಾಗಾದರೆ ಆಯೋಗದ ಶಿÁರಸ್ಸಿನಂತೆ ನಮ್ಮ ರಾಜ್ಯಕ್ಕೆ ಹಣ ಏಕೆ ಬರಲಿಲ್ಲಘಿ. ಒಂದೇ ಒಂದು ಪೈಸೆಯೂ ಬಿಡುಗಡೆಯಾಗದಿದ್ದರೆ ಇದು ಅನ್ಯಾಯವಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆ ನಾನು ಪ್ರತಿಪಕ್ಷದ ನಾಯಕನಾಗಿದ್ದಾಗ ಮಾಜಿ ಸಿಎಂಗಳಾದ ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರಿಗೆ ಪತ್ರ ಬರೆದು ಕೇಂದ್ರದಿಂದ ಬರಬೇಕಾದ ತೆರಿಗೆ ಪಾಲನ್ನು ಪಡೆದುಕೊಳ್ಳಲು ಪ್ರಯತ್ನ ಮಾಡಿ ಎಂದು ಮನವಿ ಮಾಡಿಕೊಂಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲಘಿ. ಹೀಗಾದರೆ ಸರ್ಕಾರ ನಡೆಸುವುದು ಯಾರಿಗೆ ಆಗಲಿ ಕಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
16ನೇ ಹಣಕಾಸು ಆಯೋಗವನ್ನು ಹೊಸದಾಗಿ ರಚನೆ ಮಾಡಲಾಗಿದೆ. ನಮ್ಮ ರಾಜ್ಯಕ್ಕೆ ಸಿಗಬೇಕಾದ ತೆರಿಗೆ ಪಾಲನ್ನು ನೀಡುವಂತೆ ಮನವಿ ಮಾಡುತ್ತೇವೆ. ಉತ್ಪಾದನೆಗೆ ತಕ್ಕಂತೆ ತೆರಿಗೆ ನೀಡಬೇಕು. ಆದರೆ ಅದು ಸಾಧ್ಯವಾಗುತ್ತಿಲ್ಲಘಿ. ಈ ಅನ್ಯಾಯವನ್ನು ಪ್ರಶ್ನಿಸುವುದು ನಮ್ಮ ಹಕ್ಕಲ್ಲವೇ ಎಂದು ಪ್ರಶ್ನಿಸಿದರು.