ಮೈಸೂರು: ಕಾನೂನು ಉಲ್ಲಂಘಿಸಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ ಎಂಎಲ್ಎ ವಿರುದ್ಧ ಎಫ್ಐಆರ್ ಮಾಡಿ, ತನಿಖೆ ಮಾಡುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮೈಸೂರು ತಾಲೂಕಿನ ಉದ್ಬೂರು ಗ್ರಾಮ ಸರ್ವೇ ನಂ.315 ಮತ್ತು ಸರ್ವೇ ನಂ.317 ರಲ್ಲಿ
ಒಟ್ಟು 9 ಎಕರೆ 21 ಗುಂಟೆ ಜಾಗದಲ್ಲಿ ನಿರ್ಮಾಣ ಎಂ.ಕೆ. ಸೋಮಶೇಖರ್ ಅವರು ಪತ್ನಿ ಹೆಸರಿನಲ್ಲಿ ಬಡಾವಣೆ ಮಾಡುತ್ತಿದ್ದಾರೆ. ಸುಳ್ಳು ದಾಖಲೆ ಹಾಗೂ ಸರ್ಕಾರಿ ಪತ್ರ ನಕಲಿ ಮಾಡಿರುವ ಆರೋಪದ ಕಾರಣಕ್ಲೆ ಸೋಮಶೇಖರ್ ದಂಪತಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ರೇರಾ ಅಧಿಕಾರಿ ಆದೀಶ್ ಸಾಗರ್ ದೂರು ನೀಡಿದ್ದರು.
6 ತಿಂಗಳಲ್ಲಿ ಸಂಭವಿಸಲಿರುವ ಹೃದಯಾಘಾತವನ್ನು ರಕ್ತಪರೀಕ್ಷೆಯಿಂದಲೇ ಪತ್ತೆ ಹಚ್ಚಬಹುದು !
ಎಂ.ಕೆ.ಸೋಮಶೇಖರ್ ಮತ್ತು ಪತ್ನಿ ಶ್ರೀಮತಿ ಎಲ್.ಕುಸುಮಾ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ಅಧಿಕಾರಿಗಳು, ಉದ್ಬೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಭೂಮಾಪಕರು ಮತ್ತು ಇನ್ನಿತರರು ಸೇರಿಕೊಂಡು ಅಕ್ರಮವಾಗಿ ಹಣ ಸಂಪಾದಿಸಲು ಕಾನೂನು ಬಾಹಿರ ಲೇ ಔಟ್ ನಿರ್ಮಾಣ ಮಾಡಿದ್ದಾರೆ.
ನಕಲು ಮತ್ತು ಸುಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ. ಸರ್ಕಾರದ ದಾಸ್ತಾವೇಜುಗಳನ್ನು ನಕಲಿ ಮಾಡಿದ್ದಾರೆಂದು ಆದೀಶ್ ಸಾಗರ್. ಆರೋಪ ಮಾಡಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ತನಿಖೆ ಮಾಡಿ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಬೆಂಗಳೂರಿನ 42ನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ. ಕೋರ್ಟ್ ಆದೇಶದ ಅನ್ವಯ ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.