ಬೆಂಗಳೂರು: ಚಿನ್ನದ ಅಂಗಡಿಗೆ (Gold) ಕನ್ನ ಹಾಕಿದ ಕಳ್ಳರು ಲಾಕರ್ನಲ್ಲಿದ್ದ 250 ಗ್ರಾಂ ಚಿನ್ನ, 1.8 ಲಕ್ಷ ರೂ. ನಗದು (Cash) ದೋಚಿ ಪರಾರಿಯಾದ ಘಟನೆ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ನಡೆದಿದೆ. ಬಸವನಗುಡಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಬೆನಕ ಗೋಲ್ಡ್ನ (Benaka Gold) ಮೂರು ಕಬ್ಬಿಣದ ಗೇಟ್ ಬೀಗ ಮುರಿದು ಕೃತ್ಯ ಮಾಡಲಾಗಿದೆ.
Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬುಧವಾರ ಎಂದಿನಂತೆ ವ್ಯವಹಾರ ಮಾಡಿದ್ದ ಕಂಪನಿಯ ಸಿಬ್ಬಂದಿ ಗ್ರಾಹಕರಿಂದ ಚಿನ್ನಭರಣ ಖರೀದಿ ಮಾಡಿತ್ತು. ಮಧ್ಯರಾತ್ರಿ ಅಂಗಡಿಗೆ ನುಗ್ಗಿದ ಕಳ್ಳರು ಚಿನ್ನ, ಹಣ ದೋಚಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್ ಅನ್ನು ಪುಡಿ ಮಾಡಿದ್ದಾರೆ.
ಕಳೆದ ರಾತ್ರಿ ರಾಮಮೂರ್ತಿ ನಗರದಲ್ಲಿದ್ದ ಬೇನಕ ಗೋಲ್ಡ್ಗೆ ಕನ್ನ ಹಾಕಿದ್ದರು. ಈಗ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.