ಬೆಂಗಳೂರು: ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನುಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ.
Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ
ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಹಬ್ಬ ಆಚರಣೆಗೆ ನಿರ್ಬಂಧ ವಹಿಸಿದ್ದು ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಸರ್ಕಾರದಿಂದ ಅವಕಾಶ
ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಸೂಚನೆ ಮೇರೆಗೆ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ