ಶಿವಮೊಗ್ಗ: ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೊಬ್ಬರಿ ಬೆಂಬಲ ಬೆಲೆಯ ಚರ್ಚೆಗೆ ಉತ್ತರ ನೀಡಿದ ಅವರು, ನೋಂದಣಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಒಂಭತ್ತು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು,
Coffee Vs Tea: ಬ್ಲ್ಯಾಕ್ ಕಾಫಿ ಮತ್ತು ಬ್ಲ್ಯಾಕ್ ಟೀ ನಡುವಿನ ವ್ಯತ್ಯಾಸಗಳು: ಯಾವುದು ಆರೋಗ್ಯಕರ..?
ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು. ಈವರೆಗೆ ಆಗಿರುವ ನೋಂದಣಿಯನ್ನು ಪುನರ್ ಪರಿಶೀಲನೆ ಮಾಡಿ ವಾಮ ಮಾರ್ಗದಲ್ಲಿ ವರ್ತಕರು ಮಾಡಿಕೊಂಡಿರುವ ನೋಂದಣಿಗಳನ್ನು ರದ್ದುಪಡಿಸಿ ಅರ್ಹ ರೈತರಿಂದ ಕೊಬ್ಬರಿ ಖರೀದಿ ಮಾಡಲಾಗುವುದು ಎಂದು ಹೇಳಿದರು.