ಬೆಂಗಳೂರು:- 1 ವಾರದಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ಗೆ ಚಳಿ, ಜ್ವರ ಬಿಡಿಸಿದ್ದೀವಿ. ಇದೇ ಮೊದಲ ಬಾರಿ ಬಜೆಟ್ ಮಂಡನೆ ವೇಳೆ ಪ್ರತಿಭಟನೆ ಮಾಡಿದ್ದೇವೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿ ನಾನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಬಳಿಕ ಹೊಸ ಹುರುಪು ಬಂದಿದೆ. 40% ಕಾಂಗ್ರೆಸ್ ಸರ್ಕಾರದ ಬಜೆಟ್ ಪಾರದರ್ಶಕವಾಗಿ ಇರಬೇಕಿತ್ತು. ಸರ್ಕಾರದ ಬಜೆಟ್ಗೆ ಅದರದೇ ಆದ ಪಾವಿತ್ರ್ಯತೆ ಇದೆ. ಬಜೆಟ್ ಓದುವಾಗಲೆ ಕೇಂದ್ರ ಸರ್ಕಾರ ಮೋಸ ಮಾಡಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಒಬ್ಬರೇ ಅಲ್ಲ, ಬಿಜೆಪಿಯವರು ಬಜೆಟ್ ಮಂಡಿಸಿದ್ದೇವೆ ಎಂದು ಕಿಡಿಕಾರಿದ್ದಾರೆ.
ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ನಾವು ಯಾವತ್ತೂ ಸಹ ಕೇಂದ್ರ ಸರ್ಕಾರವನ್ನು ತೆಗಳಿಲ್ಲ ಎಂದು ಹೇಳಿದ್ದಾರೆ
ಇಲ್ಲಿ ಒಂದು ರೀತಿ ಚುನಾವಣೆಯ ಸ್ಟಂಟ್ಗಾಗಿ ಸೋನಿಯಾ ಗಾಂಧಿ ಮೆಚ್ಚಿಸಲು ಮೋದಿರನ್ನು ಟಾರ್ಗೆಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳ ಸೇಡಿನ ಭಾಷಣದ ವಿರುದ್ಧ ನಾನು ಮಾತನಾಡಿದ್ದೇನೆ. 7 ಕೋಟಿ ಜನರ ವಿರುದ್ಧ ಸೇಡು ತೀರಿಸಿಕೊಳ್ಳುವ ರೀತಿ ಬಜೆಟ್ ಮಂಡನೆ ಮಾಡಲಾಗಿದೆ. ಹೀಗಾಗಿ ನಾವು ಪ್ರತಿಭಟನೆ ಮಾಡಿದ್ದೇವೆ ಎಂದರು.