ದಾವಣಗೆರೆ:- ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ BJP ಯುವ ಘಟಕದಿಂದ ಡಿಕೆ ಸುರೇಶ್ ವಿರುದ್ಧ ದೂರು ನೀಡಲಾಗಿದೆ.
ಪಾಲಿಕೆ ಸದಸ್ಯ ಶಿವಪ್ರಕಾಶ್ ನೇತೃತ್ವದಲ್ಲಿ ನಗರ ಡಿವೈಎಸ್ ಮಲ್ಲೇಶ್ ದೊಡ್ಡಮನಿ ಮೂಲಕ ಎಸ್ಪಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಇನ್ನೂ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಸುರೇಶ್, ತಮ್ಮ ಹೇಳಿಕೆಗೆ ಬದ್ಧರಾಗಿರುವ ಡಿ.ಕೆ.ಸುರೇಶ್ ನನ್ನ ಹೇಳಿಕೆಯನ್ನು ವಾಪಸ್ ತೆಗೆದುಕೊಳ್ಳೋ ಪ್ರಶ್ನೆಯೇ ಇಲ್ಲ ಅಂತ ಖಡಕ್ ಆಗಿಯೇ ಹೇಳಿದ್ದಾರೆ. ನನ್ನ ಹೇಳಿಕೆಯನ್ನು ಪ್ರತಿ ಹಂತದಲ್ಲೂ ಬಿಜೆಪಿಯವರು ನನ್ನ ಮಾತನ್ನು ತಿರುಚುತ್ತಿದ್ದಾರೆ. ಅನಿವಾರ್ಯ ಎಂಬುದನ್ನು ದೇಶ ವಿಭಜನೆ ಅಂದರೆ ಏನೂ ಮಾಡುವುದಕ್ಕೆ ಆಗಲ್ಲ ಅಂತ ಟಕ್ಕರ್ ಕೊಟ್ಟಿದ್ದಾರೆ