ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪಳದಲ್ಲಿ ಬ್ಯಾಗ್ʼನಲ್ಲಿದ್ದ ವಸ್ತು ಸ್ಫೋಟಗೊಂಡು ಹಲವರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಬೆಡ್ಶೀಟ್ ಮಾರಲು ಬಂದಿದ್ದ ಆಂಥೋಣಿ ಎಂಬಾತ ಸೇರಿದಂತೆ ಇತರೆ ಬೆಡ್ಶೀಟ್ ವ್ಯಾಪಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಬಟ್ಟೆ ಒಗೆದ ತಕ್ಷಣ ವಾಷಿಂಗ್ ಮಷೀನ್ ಮುಚ್ಚಬಾರದಂತೆ! – ಕಾರಣ ಏನು ಗೊತ್ತಾ!?
ಗಾಯಾಳುಗಳಿಗೆ ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉಮೇಶ್ ಎಂಬಾತ ಆಂಥೋಣಿ ಬಳಿ ಬ್ಯಾಗ್ ಇಟ್ಟು ಹೋಗಿದ್ದ. ಈ ವೇಳೆ ಬ್ಯಾಗ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಅಂಥೋನಿ ಬಳಿ ಪರಿಚಯಸ್ಥರು ಬ್ಯಾಗ್ ಇಟ್ಟು ಹೋಗಿದ್ದರು. ಇದೇ ಬ್ಯಾಗ್ ಆಕಸ್ಮಿಕವಾಗಿ ಸ್ಪೋಟಗೊಂಡಿದೆ. ಉಮೇಶ್ ಎನ್ನುವ ವ್ಯಕ್ತಿ ಬ್ಯಾಗ್ ಇಟ್ಟು ಹೋಗಿದ್ದು ಎನ್ನಲಾಗುತ್ತಿದ್ದು, ಆತನ ಬಗ್ಗೆ ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೆಲ ಹೊತ್ತು ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.