ಗದಗ:- ಜಿಲ್ಲೆಯಲ್ಲಿ ಇಂದು ಅದ್ಧೂರಿ ಶಿವಾಜಿ ಜಯಂತೋತ್ಸವ ನಡೆಯಲಿರುವ ಹಿನ್ನೆಲೆ ಇಡೀ ಗದಗ-ಬೆಟಗೇರಿ ಅವಳಿ ನಗರ ಸಂಪೂರ್ಣ ಕೇಸರಿಮಯವಾಗಿದೆ.
ಹೀಗಾಗಿ ಶ್ರೀರಾಮಸೇನೆ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಗದಗ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಗಾಂಧಿ ಸರ್ಕಲ್, ಟಾಂಗಾ ಕೂಟ್ ಸರ್ಕಲ್, ಬಸವೇಶ್ವರ ಸರ್ಕಲ್ ಸೇರಿ ಗಲ್ಲಿ ಗಲ್ಲಿಗಳಲ್ಲೂ ಕೇಸರಿ ಬಂಟಿಗಳಿಂದ ಶೃಂಗಾರ ಮಾಡಲಾಗಿದೆ. ಬೃಹತ್ ಶಿವಾಜಿ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದ್ದು, ಹಾಗೆಯೇ ಮಹರ್ಷಿ ವಾಲ್ಮೀಕಿ ಮೂರ್ತಿಗಳು ಸೇರಿ ಹಲವು ಮೂರ್ತಿಗಳ ಮೆರವಣಿಗೆ ನಡೆಯಲಿದೆ.
ಹತ್ತು ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಭಾಗಿ ಸಾಧ್ಯತೆ ಇದೆ. ಡಿಜೆ ಅಬ್ಬರಕ್ಕೆ ಅವಳಿ ನಗರ ನಡುಗುವುದು ಅಕ್ಷರಶಃ ಸತ್ಯ. ಶಿವಾಜಿ ಜಯಂತಿ ಅಬ್ಬರ ಹಿನ್ನೆಲೆ ಅವಳಿ ನಗರದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.