ಲೋಕಸಭಾ ಚುನಾವಣೆಯ ಸೋಲಿನ ಭಯದಿಂದ ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸೀಜ್ ಮಾಡುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ, ಇದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ಅವರು ಹಿರಿಯೂರಿನ ತಾಲೂಕಿನ ಗುಯಿಲಾಳು ಟೋಲ್ ಬಳಿ ದಾವಣಗೆರೆ ಕಡೆ ಹೋಗುವಾಗ ಮಾರ್ಗ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದರು.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಪಕ್ಷದ ಶಾಸಕರು ಬಜೆಟ್ ಕೇಳಿಲ್ಲ, ನೋಡಿಲ್ಲದೆ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು ದುರಂತ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಈ ಹಿಂದೆ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿತ್ತು.
Blood Pressure: ಹೈ ಬಿಪಿ ಇರುವವರು ಒಮ್ಮೆ ಈ ಉಪಯುಕ್ತ ಮಾಹಿತಿಯನ್ನು ಓದಲೇಬೇಕು..!
ಸರ್ಕಾರ ಜಾರಿಗೆ ಬಂದ ಕೂಡಲೇ ಎಂಟು ತಿಂಗಳಲ್ಲಿ ನುಡಿದಂತೆ ನಡೆಯುವ ಮೂಲಕ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸುವಲ್ಲಿ ನಮ್ಮ ಸರ್ಕಾರ ಐತಿಹಾಸಿಕ ಸಾಧನೆ ಮಾಡಲಾಗಿದೆ. ಸುಮಾರು 150ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಕ್ರಾಂತಿಕಾರಿ ಯೋಜನೆಗಳಿಂದ ಜನತೆ ಸಂತೋಷವಾಗಿದ್ದಾರೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.