ಹುಬ್ಬಳ್ಳಿ:- ಶಿವಾಜಿ ಮಹರಾಜರು ಮುಸ್ಲಿಂ ವಿರೋಧಿ ಅಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ನಗರದ ಮರಾಠಾ ಗಲ್ಲಿಯಲ್ಲಿ ನಡೆದ ಶಿವಾಜಿ ಮಹರಾಜರ 397 ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹರಾಜರು ಮುಸ್ಲಿಂ ವಿರೋಧಿ ಅಲ್ಲ. ಇತಿಹಾಸವನ್ನು ಇವತ್ತು ಯಾರ ಹೇಗೆಬೇಕಾದರೂ ಹೇಳಬಹುದು. 60 ಸಾವಿರ ಮುಸ್ಲಿಂರು ಶಿವಾಜಿ ಸೈನ್ಯದಲ್ಲಿ ಇದ್ದರು. ಭಗವಾ ಕಲರ್ ಶಿವಾಜಿ ಮಹರಾಜರದು. ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇರುವಾಗಲೇ ಭಗವಾ ಕಲರ್ ಯಾರದೂ ಅಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ನಾನೊಬ್ಬ ಮರಾಠಾ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ನನಗೆ ಬಸವಣ್ಣ ಬೇಕು, ರಾಮ ಬೇಕು, ರಹೀಮ್ ಬೇಕು. ಮರಾಠರು ಶೈಕ್ಷಣಿಕವಾಗಿ ಮುಂದೆ ಬರಬೇಕು. ಝಿರೋದಿಂದ ಇಂತಹ ಎಂಫೈರ್ ಕಟ್ಟಿದ್ದು ಶಿವಾಜಿ ಮಹರಾಜರು. ನಾವು ಛತ್ರಪತಿ ವಂಶದವರು. ಯಾರಿಗೆ ತೊಂದರೆ ಆದರೂ ನಾವ ಅವರ ಜೊತೆ ನಿಲ್ಲಬೇಕು ಎಂದಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ ಆದರೆ ಸುಪ್ರೀಂಕೋರ್ಟ್ ಸೂಚಿಸಿದ ಜಾಗದಲ್ಲಿ ಮಂದಿರ ಕಟ್ಟಿಲ್ಲ ಎಂದು ನಿನ್ನೆಯಷ್ಟೇ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿಕೊಂಡಿದ್ದರು. ಬಳಿಕ ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ರಾಮ ಮಂದಿರ ಕಟ್ಟಿದ್ದಾರೆ ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.