ಬೆಂಗಳೂರು:- ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.
ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ. ಆದ್ರೆ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥ ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದರು.
ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿರುವ ಸಚಿವರು, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, `ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ’ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ