ಬೆಂಗಳೂರು:- ಕನ್ನಡ ಮಾತನಾಡೋಕೆ ಬರಲ್ಲ ಅಂತಾ ಟೀ ಶಾಪ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆದ ಘಟನೆ ನಗರದ ಹೆಚ್ ಎಸ್ ಆರ್ ಲೇಔಟ್ ನ ಟೀ ಜಾಯಿಂಟ್, ಎಂಬ ಶಾಪ್ ನಲ್ಲಿ ಜರುಗಿದೆ.
ಅಂಗಡಿಯವರಿಗೆ ಕನ್ನಡ ಬರುವುದಿಲ್ಲವೆಂದು ಯುವಕರಿಂದ ಹಲ್ಲೆ ನಡೆಸಲಾಗಿದ್ದು, ಕನ್ನಡ ಮಾತನಾಡು ಅಂತಾ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಚಾರಕ್ಕಾಗಿ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಲೀಕ ಅಳಲು ತೋಡಿಕೊಂಡಿದ್ದಾರೆ.
ಕನ್ನಡ ಅರ್ಥವಾಗುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ. ಈ ಸಂಬಂಧ ಟೀ ಜಾಯಿಂಟ್ ಮಾಲೀಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೆಚ್, ಎಸ್, ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.