ನವದೆಹಲಿ:- ನಿಮ್ಮ ಮಗನನ್ನು ಹುಚ್ಚು ಹುಚ್ಚಾಗಿ ಮಾತಾಡದಂತೆ ನೋಡಿಕೊಳ್ಳಿ ಎಂದು ಸೋನಿಯಾಗೆ ಸ್ಮೃತಿ ಸಲಹೆ ನೀಡಿದ್ದಾರೆ.
ಅಮೇಥಿಯಲ್ಲಿ ಮಂಗಳವಾರವೂ ಯಾತ್ರೆ ನಡೆಸಿದ್ದ ರಾಹುಲ್ ಗಾಂಧಿ, ರಾತ್ರಿಹೊತ್ತು ಮದ್ಯ ಸೇವಿಸುವವರಿಂದ ಉತ್ತರಪ್ರದೇಶ ಭವಿಷ್ಯ ನರ್ತನ ಮಾಡ್ತಿದೆ ಅಂತಾ ವಿಮರ್ಶೆ ಮಾಡಿದ್ರು. ಅಷ್ಟೇ ಅಲ್ಲ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಹಾಡಹಗಲೇ ಕುಡಿದುಬಿದ್ದಿದ್ದ ವ್ಯಕ್ತಿಗಳನ್ನು ಕಂಡೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ರು. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೌಂಟರ್ ನೀಡಿದ್ದಾರೆ.
ರಾಹುಲ್ ಮಾತು ಕೇಳಿದ್ರೆ ಅವರ ಮನಸ್ಸಲ್ಲಿ ಎಷ್ಟು ವಿಷ ತುಂಬಿಕೊಂಡಿದೆ ಎನ್ನುವುದು ಗೊತ್ತಾಗ್ತಿದೆ. ತಮ್ಮ ಮಗನನ್ನು ಚೆನ್ನಾಗಿ ಬೆಳೆಸಲಾಗದಿದ್ರೆ ಹೋಯ್ತು.. ಕನಿಷ್ಠ ಹುಚ್ಚು ಹುಚ್ಚಾಗಿ ಮಾತಾಡದಂತೆ ನೋಡಿಕೊಳ್ಳಲಿ ಎಂದು ಸೋನಿಯಾ ಗಾಂಧಿಗೆ ಸ್ಮೃತಿ ಇರಾನಿ ಸಲಹೆ ನೀಡಿದ್ರು. ರಾಹುಲ್ ತಮ್ಮ ಮಾತಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.