ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಬಿಸಿಲಿನ ತಾಪ ಹೆಚ್ಚಾಗಿದದೆ. ಎಲ್ಲೆಡೆಗೆ ನೀರಿಗಾಗಿ ಹಾಹಾಕಾರ ಶುರುವಾಗಿದ್ದು ಜನ್ರು ನೀರಿಗಾಗಿ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಬರದ ಛಾಯೆ ಹೆಚ್ಚಾಗುತ್ತಿದೆ..ಮಳೆ ಕೊರತೆಯಿಂದಾಗಿ ಒಂದೆಡೆ ಭೀಕರ ಬರ ಪರಿಸ್ಥಿತಿ ಇದ್ದರೆ ಮತ್ತೊಂದೆಡೆ ಬೇಸಿಗೆ ಆರಂಭಕ್ಕೂ ಮುನ್ನ ಎದುರಾಗಿರುವ ಜಲಕ್ಷಾಮ ಆತಂಕ ಮೂಡಿಸಿದೆ. ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ… ಈ ಕುರಿತ ಒಂದು ವರದಿ ಇಲ್ಲಿದೆ.
ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಬೋರ್ವೆಲ್ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಬೆಂಗಳೂರಿನ ಹಲವಾರು ಭಾಗಗಳಲ್ಲಿ ನೀರಿನ ಕೊರತೆ ಹೆಚ್ಚಾಗಿದೆ..
ಬೆಂಗಳೂರಿಗರೇ ಗಮನಿಸಿ… ಫೆಬ್ರವರಿ 27, 28ರಂದು ಎರಡು ದಿನ ನೀರು ಪೂರೈಕೆಯಲ್ಲಿ ಸ್ಥಗಿತ!
ಆರ್.ಆರ್.ನಗರದ ಬಂಗಾರಪ್ಪ ನಗರದಲ್ಲಿ ನೀರಿಗಾಗಿ ಬಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.. ಬೇಸಿಗೆ ಮುನ್ನವೇ ಈ ಜಾಗದಲ್ಲಿ ನೀರಿನ ಅಭಾವ ಕಾಡುತ್ತಿದೆ..ಈ ನಗರದಲ್ಲಿ ಜಲ ದಾಹ ಶುರುವಾಗಿದ್ದು, ೩೫ ಸಾವಿರಕ್ಕೂ ಹೆಚ್ಚು ಮನೆಗಳ ನಿವಾಸಿಗಳು ನೀರಿಲ್ಲದೇ ಹೈರಾಣಾಗಿದ್ದಾರೆ. 10 ವರ್ಷಗಳಿಂದ ದಾಹ ತಣಿಸುತ್ತಿದ್ದ ಏಕೈಕ ಬೋರ್ವೆಲ್ನಲ್ಲಿ ನೀರು ಬತ್ತಿದೆ. ಇಲ್ಲಿ ಸರ್ಕಾರದಿಂದ ಕಾವೇರಿ ನೀರಿಗಾಗಿ ಕನೆಕ್ಷನ್ ಕೂಡ ಕೊಟ್ಟಿಲ್ಲ.. ಎಲೆಕ್ಷನ್ ಸಮಯದಲ್ಲಿ ಮಾತ್ರ ಬಂದು ಭರವಸೆ ನೀಡುತ್ತಾರೆ. ತದನಂತರ ಯಾರೂ ಕೂಡ ಬಂದು ನಮ್ಮ ದುಃಖ ಕೇಳಲು ಮುಂದೆ ಬರುವುದಿಲ್ಲ..ವಿಧಿ ಇಲ್ಲದೆ ನಿವಾಸಿಗಳು ಟ್ಯಾಂಕರ್ ನೀರು ಮೊರೆಹೋಗಿದ್ದಾರೆ.
ಇನ್ನು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಘಟಕಗಳ ದುರಸ್ತಿಗೆ ಹಣ ನೀರಿನಂತೆ ಖರ್ಚಾಗಿದೆ. ಪ್ರತಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಕೋಟಿ ಲೆಕ್ಕದಲ್ಲಿ ಅನುದಾನ ಜಿಲ್ಲೆಗೆ ಬರುತ್ತಿದೆ. ಆದರೆ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಬೇಕಾಗಿದ್ದ ಈ ಘಟಕಗಳೇ ಮುಖ್ಯ ಸಮಸ್ಯೆಯಾಗಿ ಪರಿಣಮಿಸಿವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ ಇಲ್ಲಿನ ನಿವಾಸಿಗಳು..
ಒಟ್ಟಿನಲ್ಲಿ ಕೆರೆಗಳು ಬತ್ತಿ ಹೋಗುವುದರಿಂದ ಕೆರೆ ಪ್ರದೇಶದ ಜೀವಿಗಳಿಗೆ ಸಂಚಕಾರ ಎದುರಾಗಿದೆ ಇನ್ನಾದರು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆರೆ ತುಂಬಿಸುವ ಮೂಲಕ ಅಲ್ಲಿ ಜೀವಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕಿದೆ.