ತನಿಷಾ ಜೊತೆಗಿನ ಸಿನಿಮಾ ಬಗ್ಗೆ ವರ್ತೂರು ಸಂತೋಷ್ ಪ್ರತಿಕ್ರಿಯೆ ನೀಡಿದ್ದಾರೆ. ವರ್ತೂರು ಸಂತೋಷ್ ಜೊತೆ ಸಿನಿಮಾ ಮಾಡ್ತೀನಿ. ಆ ಚಿತ್ರವನ್ನು ನಾನೇ ನಿರ್ಮಾಣ ಮಾಡ್ತೀನಿ ಅಂತ ತನಿಷಾ ಕುಪ್ಪಂಡ ಮಾಧ್ಯಮಕ್ಕೆ ಕೆಲ ದಿನಗಳ ಹಿಂದೆ ಮಾತನಾಡಿದ್ದರು. ಹಾಗಾಗಿ ತನಿಷಾ ಜೊತೆ ಸಿನಿಮಾ ಮಾಡ್ತೀರಾ ಎಂದು ವರ್ತೂರುಗೆ ಸಂದರ್ಶನವೊಂದರಲ್ಲಿ ಪ್ರಶ್ನೆ ಕೇಳಲಾಯಿತು.
ಸಿನಿಮಾ ಕುರಿತು ತನಿಷಾ ನನ್ನ ಜೊತೆ ಮಾತನಾಡಿಲ್ಲ. ಆದರೆ ಅವರು ಕೇಳೋದು ಹೆಚ್ಚಾ, ನಾನು ಮಾಡೋದು ಹೆಚ್ಚಾ ಎಂದಿದ್ದಾರೆ. ಖಂಡಿತಾ ಅವರ ಜೊತೆ ಸಿನಿಮಾ ಮಾಡ್ತೀನಿ ಎಂದು ವರ್ತೂರು ಸಂತೋಷ್ ಮಾತನಾಡಿದ್ದಾರೆ.
ಅಭಿಮಾನಿಗಳ ಆಸೆಯಂತೆ ‘ಹಳ್ಳಿಕಾರ್’ ಕುರಿತು ಸಿನಿಮಾ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ನಿರ್ಮಾಪಕರ ಜೊತೆ ಮಾತುಕತೆ ಆಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡೋದಾಗಿ ತಿಳಿಸಿದ್ದಾರೆ.
ನಿಮಗೆ ಜನರ ಬೆಂಬಲವಿದೆ. ರಾಜಕೀಯಕ್ಕೆ ಬರುತ್ತೀರಾ ಎಂದು ಸಂತೋಷ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಪ್ರತಿಕ್ರಿಯಿಸಿ, ನಾನು ರಾಜಕೀಯಕ್ಕೆ ಬರಲ್ಲ. ಯಾವುದೇ ಪಕ್ಷ, ಸಂಘದ ಜೊತೆ ಗುರುತಿಸಿಕೊಳ್ಳಲು ಇಷ್ಟವಿಲ್ಲ. ಜನರ ಸೇವೆ ಮಾಡಲು ರಾಜಕೀಯವೇ ಬೇಕೆಂದು ಇಲ್ಲ. ದೇವರ ಆಶೀರ್ವಾದ ಇದ್ದರೆ ಸಾಕು ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.