ಬಳ್ಳಾರಿ:- ಜಿಲ್ಲೆಯ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ನಿಂತಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜರುಗಿದೆ.
ಒಂದೇ ಬೈಕ್ನಲ್ಲಿ ಐದು ಜನರು ಪ್ರಯಾಣ ಮಾಡುತ್ತಿದ್ದು, ಚಾಲಕನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ. ಹೊಸಪೇಟೆ ಮೂಲದ ಜಂಬುನಾಥ್ಹಳ್ಳಿಯ ವೆಂಕಟೇಶ(46), ಹೊಸಪೇಟೆಯ ಅಖಿಲಾ(06), ಆಶಾ (08) ಮೃತರು. ನಾಲ್ಕು ವರ್ಷದ ಸರಸ್ವತಿ ಹಾಗೂ ಜಂಬಕ್ಕ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಡುತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.