ಬೇಸಿಗೆ ಬಂತೆಂದರೆ ಸಾಕು ಮಕ್ಕಳು ಒಂದಲ್ಲ ರೀತಿಯಲ್ಲಿ ಅನಾರೋಗ್ಯಕ್ಕೀಡಾಗುತ್ತಾರೆ. ಇದರಲ್ಲಿ ದಡಾರ ಕೂಡ ಒಂದು. ಗ್ರಾಮೀಣ ಭಾಗದಲ್ಲಿ ‘ ಅಮ್ಮ’ ಎಂದು ಕರೆಯಲಾಗುವ ಇದನ್ನು ಇಂಗ್ಲಿಷ್ನಲ್ಲಿ ಮೀಸೆಲ್ಸ್ (Measles) ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿಕ್ಕಮಕ್ಕಳಲ್ಲಿ ಕಂಡು ಬರುವ ಈ ರೋಗಕ್ಕೆ ಮಧ್ಯಪ್ರದೇಶದಲ್ಲಿ ಈಗಾಗಲೇ ಇಬ್ಬರು ಪುಟ್ಟ ಕಂದಮ್ಮಗಳು ಬಲಿಯಾಗಿವೆ. ಜೊತೆಗೆ ಸುಮಾರು 17 ಮಂದಿ ಸೋಂಕಿಗೆ ಒಳಗಾಗಿದ್ದಾರೆ.
ರುಬಿಯೋಲಾ ಎಂದೂ ಕರೆಯಲ್ಪಡುವ ದಡಾರವು ಮೊದಲು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಸಿಲ್ಲಾ ಎಂಬ ವೈರಸ್ ನಿಂದ ಬರುವ ರೋಗ ಇದಾಗಿದ್ದು, ಒಬ್ಬರಿಂದ ಒಬ್ಬರಿಗೆ ಬಹಳ ಬೇಗ ಹರಡುತ್ತದೆ. ಶಾಲೆಗೆ ಹೋಗುವ ಮಕ್ಕಳಲ್ಲಿ ದಡಾರ ಕಾಣಿಸಿಕೊಂಡಲ್ಲಿ, ಮಗು ಗುಣಮುಖವಾಗುವವರೆಗೂ ಶಾಲೆಗೆ ಕಳುಹಿಸದೇ ಇರುವುದು ಒಳಿತು. ದಡಾರ ಇರುವ ಮಗುವನ್ನು ಶಾಲೆಗೆ ಕಳುಹಿಸಿದಲ್ಲಿ ಇತರ ಮಗುವಿಗೂ ರೋಗ ಅಂಟುವ ಸಾಧ್ಯತೆ ಹೆಚ್ಚು.
ಲಕ್ಷಣಗಳು: ಈ ರೋಗ ಕಾಣಿಸಿಕೊಳ್ಳುವ ಮೊದಲನೇ ದಿನ ಜ್ವರ ಬರುತ್ತದೆ. ಆರಂಭದಲ್ಲಿ ಮುಖದ ಮೇಲಷ್ಟೇ ಕಾಣಿಸಿಕೊಳ್ಳುವ ನೀರಗುಳ್ಳೆಗಳು ದಿನಗಳೆದಂತೆ ಹೊಟ್ಟೆ ಹಾಗೂ ದೇಹದ ಇತರ ಭಾಗಕ್ಕೂ ವಿಸ್ತರಿಸುತ್ತವೆ. ದಡಾರವು ಸಾಮಾನ್ಯವಾಗಿ ಜ್ವರ, ಶೀತ, ಕೆಮ್ಮು ಮತ್ತು ಕಣ್ಣುಗಳು ಕೆಂಪಾಗಿ ನೀರು ಬರುವುದು. ಬೆಳಕು ನೋಡೋಕೆ ಆಗದೇ ಇರುವುದು. ಕೆಲ ದಿನಗಳ ನಂತರ ದೇಹದ ಮೇಲೆ ದದ್ದು ಕಾಣಿಸಿಕೊಳ್ಳುತ್ತದೆ. ಮುಖದ ಮೇಲೆ ಪ್ರಾರಂಭವಾಗುತ್ತದೆ ಮತ್ತು ದೇಹದ ಉಳಿದ ಭಾಗಗಳಿಗೆ ಹರಡುತ್ತದೆ.
ಹೇಗೆ ಹರಡುತ್ತದೆ?: ಕೆಮ್ಮಿದಾಗ, ಸೀನಿದಾಗ ಉಸಿರಾಟದ ಹನಿಗಳ ಮೂಲಕ ಹರಡುತ್ತದೆ. ದಡಾರ ರೋಗಿಯ ಬಾಯಲ್ಲಿ, ಮೂಗಿನಲ್ಲಿ ಮತ್ತು ಗಂಟಲ ಸ್ರವಿಕೆಯಲ್ಲಿ ವೈರಸ್ಗಳಿರುತ್ತವೆ. ಈ ರೋಗಿ ಸೀನಿದಾಗ, ಕೆಮ್ಮಿದಾಗ ಹೊರಗಿನ ಪರಿಸರಕ್ಕೆ ವೈರಸ್ಗಳು ಸೇರುತ್ತವೆ. ಉಸಿರಾಟದ ಮೂಲಕ ರೋಗಾಣುಗಳು ಆರೋಗ್ಯವಂತ ವ್ಯಕ್ತಿಯ ದೇಹವನ್ನು ಪ್ರವೇಶಿಸಿ, ರೋಗ ಲಕ್ಷಣಗಳನ್ನು ಹೊರಹೊಮ್ಮಿಸುತ್ತವೆ. ಆರೋಗ್ಯವಂತ ಮಗುವಿಗೆ ಸೋಂಕಿನ ಮೂಲಕ ದಡಾರ ಹರಡುತ್ತದೆ. ದಡಾರ ರೋಗಿ ಉಪಯೋಗಿಸಿದ ಸೋಂಕಿನಿಂದ ಕೂಡಿದ ವಸ್ತುಗಳಿಂದಲೂ ಸೋಂಕು ಹರಡಬಹುದು. ದಡಾರ ಕಾಣಿಸಿಕೊಂಡ ಪ್ರಾರಂಭದ ಐದು ದಿನಗಳವರೆಗೆ ಸೋಂಕು ತೀವ್ರವಾಗಿರುವುದರಿಂದ ಬೇರೆ ಮಕ್ಕಳಿಂದ ಮಗುವನ್ನು ಪ್ರತ್ಯೇಕವಾಗಿರಿಸುವುದು ಅಗತ್ಯ.
ತಡೆಗಟ್ಟುವಿಕೆ ಹೇಗೆ?: ದಡಾರವನ್ನು ತಡೆಗಟ್ಟಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ವ್ಯಾಕ್ಸಿನೇಷನ್. ದಡಾರ, ಮಂಪ್ಸ್ ಮತ್ತು ರುಬೆಲ್ಲಾ (ಒಒಖ) ಲಸಿಕೆ ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಲಸಿಕೆಯಾಗಿದ್ದು ಅದು ದಡಾರದ ವಿರುದ್ಧ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ. ಲಸಿಕೆಯನ್ನು ಸಾಮಾನ್ಯವಾಗಿ ಎರಡು ಡೋಸ್ ಗಳಲ್ಲಿ ನೀಡಲಾಗುತ್ತದೆ, ಮೊದಲ ಡೋಸ್ ಅನ್ನು 12-15 ತಿಂಗಳ ವಯಸ್ಸಿ ನಲ್ಲಿ ಮತ್ತು ಎರಡನೇ ಡೋಸ್ ಅನ್ನು 4-6 ವರ್ಷ ವಯಸ್ಸಿ ನಲ್ಲಿ ನೀಡಲಾಗುತ್ತದೆ. ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡರೆ ಮನೆಯಲ್ಲಿಯೇ ಇರುವ ಮೂಲಕ ದಡಾರ ಹರಡುವುದನ್ನು ತಪ್ಪಿಸಬಹುದು.
ಮುನ್ನೆಚ್ಚರಿಕೆ ಕ್ರಮ: ದಡಾರದ ಲಸಿಕೆಯನ್ನು ಮಕ್ಕಳಿಗೆ ಕೊಡಿಸಬೇಕು. ಈ 2017 ರ ಫೆಬ್ರವರಿ ತಿಂಗಳಲ್ಲಿ ಕರ್ನಾಟಕದಲ್ಲಿ ಈ ಲಸಿಕೆಯನ್ನು ಎಲ್ಲಾ ಮಕ್ಕಳಿಗೆ ಕೊಡುವ ಅಭಿಯಾನ ಆರಂಭವಾಗಿದೆ. ಅದರ ಉಪಯೋಗವನ್ನು ಅಗತ್ಯವಿರುವ ಎಲ್ಲರೂ ಪಡೆದುಕೊಳ್ಳಬೇಕು.
ಅಗತ್ಯ ಕ್ರಮಗಳೇನು?
* ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ: ಆಗಾಗ ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆಯಿರಿ. ಕೆಮ್ಮುವುದು, ಸೀನುವುದು ಮಾಡುವಾಗ ಜಾಗ್ರತೆವಹಿಸಿ. ಸಾರ್ವಜನಿಕ ಸ್ಥಳಗಳಲ್ಲಿ ಸೋಪ್ ಮತ್ತು ನೀರು ಲಭ್ಯವಿಲ್ಲದಿದ್ದರೆ, ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಿ.
* ಅನಾರೋಗ್ಯದ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಿ: ಸೋಂಕಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ದಡಾರ ಉಸಿರಾಟದ ಹನಿಗಳ ಮೂಲಕ ಹರಡುತ್ತದೆ. ಹೀಗಾಗಿ ಅನಾರೋಗ್ಯದ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಿ.
* ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ: ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ, ಸಾಕಷ್ಟು ನಿದ್ರೆ ಮತ್ತು ಒತ್ತಡವನ್ನು ನಿರ್ವಹಿಸುವ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ. ಬಲವಾದ ರೋಗನಿರೋಧಕ ಶಕ್ತಿಯು ನಿಮ್ಮ ದೇಹವು ಸೋಂಕುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ.
* ನವೀಕೃತ ವ್ಯಾಕ್ಸಿನೇಷನ್ಗಳನ್ನು ಖಚಿತಪಡಿಸಿಕೊಳ್ಳಿ: ದಡಾರವನ್ನು ತಡೆಗಟ್ಟಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಲಸಿಕೆಯನ್ನು ಪಡೆಯುವುದು. ಸೋಂಕಿನ ಸಾಂಕ್ರಾಮಿಕ ಹರಡುವಿಕೆಯಿಂದ ಸುರಕ್ಷಿತವಾಗಿರಲು ನೀವು ಮತ್ತು ನಿಮ್ಮ ಕುಟುಂಬದ ಸದಸ್ಯರು ದಡಾರ ಡೋಸ್ಗಳೊಂದಿಗೆ ನವೀಕೃತವಾಗಿರುವುದನ್ನು ಖಚಿತಪಡಿಸಿಕೊಳ್ಳಿ.
* ಬಾಯಿ ಮತ್ತು ಮೂಗನ್ನು ಮುಚ್ಚಿ: ಕೆಮ್ಮುವಾಗ ಅಥವಾ ಸೀನುವಾಗ, ಉಸಿರಾಟದ ಹನಿಗಳು ಹರಡುವುದನ್ನು ತಡೆಯಲು ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ ಬಳಿಕ ತಕ್ಷಣವೇ ನಿಮ್ಮ ಕೈಗಳನ್ನು ತೊಳೆಯಿರಿ.